ಘಟನೆ ವಿವರ:
ಬುಧವಾರ ಸಂಜೆ ಹಿರೇಅಡವಿಗೆ ಕಾರ್ಯ ನಿಮಿತ್ತ ಹೋಗಿದ್ದಾಗ ಪ್ರಕಾಶ್ ಅವರ ಎಡಗಾಲು ಹೆಬ್ಬರಳಿಗೆ ಕೀಟವೊಂದು ಕಡಿದಿದೆ. ಮನೆಗೆ ವಾಪಸಾದ ಅವರನ್ನು ಚಿಕಿತ್ಸೆಗೆ ಕರೆದೊಯ್ಯಲು ಪತ್ನಿ ಮುಂದಾಗಿದ್ದಾರೆ. ಆದರೆ ವಿಶ್ರಾಂತಿ ಪಡೆದಲ್ಲಿ ಸರಿ ಹೋಗುತ್ತದೆ ಎಂದು ಹೇಳಿದ ಪ್ರಕಾಶ್, ಮನೆಯಲ್ಲೇ ಉಳಿದುಕೊಂಡರು. ರಾತ್ರಿ 10 ಗಂಟೆ ಸಮಯದಲ್ಲಿ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ, ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದೌಡಾಯಿಸಿದರು. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.