ಹರಪನಹಳ್ಳಿ ತಾಲ್ಲೂಕಿನ ಮಾಚ್ಚಹಳ್ಳಿ ಕೊರಚರಹಟ್ಟಿಯ ಕೆ. ಸುರೇಶ್ (25), ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಚೆಲ್ಲಾಪುರ ಗ್ರಾಮದ ಕೇಶವಮೂರ್ತಿ (30) ಹಾಗೂ ಹರಪನಹಳ್ಳಿ ತಾಲ್ಲೂಕು ವಡೇರಹಳ್ಳಿ ಕೊರಚರಹಟ್ಟಿಯ ಶೇಖರಪ್ಪ (48) ಬಂಧಿತ ಆರೋಪಿಗಳು. ಇವರಿಂದ ಅರ್ಧ ಕೆ.ಜಿ ಯಷ್ಟು ನಕಲಿ ಬಂಗಾರದ ನಾಣ್ಯ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ವಿಫ್ಟ್ ಕಾರನ್ನು ವಶಕ್ಕೆ ಪಡೆದಿದ್ದಾರೆ.