<p><strong>ಚಿತ್ರದುರ್ಗ</strong>: ಹಿರಿಯೂರು ನಗರಸಭೆಯ ಜನಪ್ರತಿನಿಧಿಗಳು ಭೂಪರಿವರ್ತನೆಗೆ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಸಾಮಾನ್ಯ ಸಭೆಯಲ್ಲಿ ಕಾನೂನು ಬಾಹಿರ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಸಭೆ ಮಾಜಿ ಸದಸ್ಯ ಜಿ.ಪ್ರೇಮ್ಕುಮಾರ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಮ್ಯಾಕ್ಲೂರಹಳ್ಳಿ ವ್ಯಾಪ್ತಿಯ 37 ಗುಂಟೆ ಜಮೀನನ್ನು ವಾಣಿಜ್ಯ ಉದ್ದೇಶದಿಂದ ಭೂಪರಿವರ್ತನೆ ಮಾಡಲು ಅರ್ಜಿ ಸಲ್ಲಿಸಲಾಗಿತ್ತು. ಅಗತ್ಯ ದಾಖಲೆಗಳನ್ನು ಒದಗಿಸಲಾಗಿತ್ತು. ಸೆ.15ರಂದು ನಡೆದ ಸಾಮಾನ್ಯ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಿಲ್ಲ. ವಿನಾಕಾರಣ ತಾಂತ್ರಿಕ ದೋಷದ ನೆಪ ಹೇಳಿ ನಿರಾಕರಿಸಲಾಗಿದೆ’ ಎಂದು ದೂರಿದರು.</p>.<p>‘ಪ್ರತಿ ಎಕರೆಯ ಭೂಪರಿವರ್ತನೆಗೆ ₹ 40 ಸಾವಿರಕ್ಕೆ ಬೇಡಿಕೆ ಇಡಲಾಗುತ್ತಿದೆ. ಲಂಚ ನೀಡಿದವರ ಕೆಲಸಗಳು ಮಾತ್ರ ನಡೆಯುತ್ತಿವೆ. ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಇಲ್ಲದ ವಿಷಯಗಳಿಗೆ ಅನುಮೋದನೆ ಸಿಕ್ಕಿದೆ. ಉದ್ಯಾನಗಳು ಕಬಳಿಕೆ ಆಗುತ್ತಿವೆ. ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಗಮನ ಹರಿಸಬೇಕು’ ಎಂದು ಮನವಿ ಮಾಡಿದರು.</p>.<p>ನಿವೃತ್ತ ಪೌರನೌಕರರು ಹಾಗೂ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎಲ್.ನಾರಾಯಣಚಾರ್, ರವಿ ಇದ್ದರು.</p>.<p>***</p>.<p>ಹಿರಿಯೂರು ನಗರಸಭೆ ಆಡಳಿತ ಹದಗೆಟ್ಟಿದೆ. ನಾಗರಿಕರಿಗೆ ಯಾವುದೇ ಸೇವೆಗಳು ಸಕಾಲದಲ್ಲಿ ಲಭ್ಯವಾಗುತ್ತಿಲ್ಲ. ನಗರಸಭೆ ಸೂಪರ್ ಸೀಡ್ ಮಾಡುವುದು ಸೂಕ್ತ.</p>.<p><strong>ದಿವಾಕರ ನಾಯಕ್,ಕಾಂಗ್ರೆಸ್ ಮುಖಂಡ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಹಿರಿಯೂರು ನಗರಸಭೆಯ ಜನಪ್ರತಿನಿಧಿಗಳು ಭೂಪರಿವರ್ತನೆಗೆ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಸಾಮಾನ್ಯ ಸಭೆಯಲ್ಲಿ ಕಾನೂನು ಬಾಹಿರ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಸಭೆ ಮಾಜಿ ಸದಸ್ಯ ಜಿ.ಪ್ರೇಮ್ಕುಮಾರ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಮ್ಯಾಕ್ಲೂರಹಳ್ಳಿ ವ್ಯಾಪ್ತಿಯ 37 ಗುಂಟೆ ಜಮೀನನ್ನು ವಾಣಿಜ್ಯ ಉದ್ದೇಶದಿಂದ ಭೂಪರಿವರ್ತನೆ ಮಾಡಲು ಅರ್ಜಿ ಸಲ್ಲಿಸಲಾಗಿತ್ತು. ಅಗತ್ಯ ದಾಖಲೆಗಳನ್ನು ಒದಗಿಸಲಾಗಿತ್ತು. ಸೆ.15ರಂದು ನಡೆದ ಸಾಮಾನ್ಯ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಿಲ್ಲ. ವಿನಾಕಾರಣ ತಾಂತ್ರಿಕ ದೋಷದ ನೆಪ ಹೇಳಿ ನಿರಾಕರಿಸಲಾಗಿದೆ’ ಎಂದು ದೂರಿದರು.</p>.<p>‘ಪ್ರತಿ ಎಕರೆಯ ಭೂಪರಿವರ್ತನೆಗೆ ₹ 40 ಸಾವಿರಕ್ಕೆ ಬೇಡಿಕೆ ಇಡಲಾಗುತ್ತಿದೆ. ಲಂಚ ನೀಡಿದವರ ಕೆಲಸಗಳು ಮಾತ್ರ ನಡೆಯುತ್ತಿವೆ. ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಇಲ್ಲದ ವಿಷಯಗಳಿಗೆ ಅನುಮೋದನೆ ಸಿಕ್ಕಿದೆ. ಉದ್ಯಾನಗಳು ಕಬಳಿಕೆ ಆಗುತ್ತಿವೆ. ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಗಮನ ಹರಿಸಬೇಕು’ ಎಂದು ಮನವಿ ಮಾಡಿದರು.</p>.<p>ನಿವೃತ್ತ ಪೌರನೌಕರರು ಹಾಗೂ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎಲ್.ನಾರಾಯಣಚಾರ್, ರವಿ ಇದ್ದರು.</p>.<p>***</p>.<p>ಹಿರಿಯೂರು ನಗರಸಭೆ ಆಡಳಿತ ಹದಗೆಟ್ಟಿದೆ. ನಾಗರಿಕರಿಗೆ ಯಾವುದೇ ಸೇವೆಗಳು ಸಕಾಲದಲ್ಲಿ ಲಭ್ಯವಾಗುತ್ತಿಲ್ಲ. ನಗರಸಭೆ ಸೂಪರ್ ಸೀಡ್ ಮಾಡುವುದು ಸೂಕ್ತ.</p>.<p><strong>ದಿವಾಕರ ನಾಯಕ್,ಕಾಂಗ್ರೆಸ್ ಮುಖಂಡ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>