‘ಪ್ರತಿ ಎಕರೆಯ ಭೂಪರಿವರ್ತನೆಗೆ ₹ 40 ಸಾವಿರಕ್ಕೆ ಬೇಡಿಕೆ ಇಡಲಾಗುತ್ತಿದೆ. ಲಂಚ ನೀಡಿದವರ ಕೆಲಸಗಳು ಮಾತ್ರ ನಡೆಯುತ್ತಿವೆ. ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಇಲ್ಲದ ವಿಷಯಗಳಿಗೆ ಅನುಮೋದನೆ ಸಿಕ್ಕಿದೆ. ಉದ್ಯಾನಗಳು ಕಬಳಿಕೆ ಆಗುತ್ತಿವೆ. ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಗಮನ ಹರಿಸಬೇಕು’ ಎಂದು ಮನವಿ ಮಾಡಿದರು.