<p><strong>ಚಳ್ಳಕೆರೆ</strong>: ನಗರದ ವಿವಿಧೆಡೆ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಏಳು ಮಂದಿಯನ್ನು ಬಂಧಿಸಿರುವ ಪೊಲೀಸರು ಪ್ರತ್ಯೇಕ ನಾಲ್ಕು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.</p>.<p>ಗುರುವಾರ ಸಂಜೆ ಗಸ್ತಿನಲ್ಲಿದ್ದ ಪೊಲೀಸರು ನಗರದ ಸರ್ಕಾರಿ, ಖಾಸಗಿ ಬಸ್ ನಿಲ್ದಾಣ, ಪಾವಗಡ ರಸ್ತೆಯ ರೈಲ್ವೆ ಗೇಟ್, ಚಿತ್ರದುರ್ಗ ರಸ್ತೆಯ ಅರಣ್ಯ ಪ್ರದೇಶ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಆರೋಪಿಗಳನ್ನು ಬಂಧಿಸದ್ದಾರೆ.</p>.<p>ಆರೋಪಿಗಳಲ್ಲಿ ಒಬ್ಬ ಡಿಪ್ಲೊಮಾ, ಮತ್ತೊಬ್ಬ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ಉಳಿದವರು ಎಸ್ಸೆಎಸ್ಸೆಲ್ಸಿ ಓದುತ್ತಿದ್ದಾರೆ.</p>.<p>‘ಅಮಲಿನಲ್ಲಿದ್ದ ಏಳು ಮಂದಿಯನ್ನು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಕಾರಣ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಆಂಧ್ರಪ್ರದೇಶದ ರಾಯದುರ್ಗ, ಕಲ್ಯಾಣದುರ್ಗ, ಆನಂತಪುರದ ಕೆಲ ವ್ಯಕ್ತಿಗಳು, ದಿನ ಬಿಟ್ಟು ದಿನ ಗಾಂಜಾ ತಂದು ನಗರದ ರೈಲ್ವೆ ನಿಲ್ದಾಣದ ಬಳಿ ಸಣ್ಣ ಚೀಟಿಯಲ್ಲಿ ಗಾಂಜಾ ಇಟ್ಟು ₹ 500ಕ್ಕೆ ಯುವಕರಿಗೆ ಮಾರಾಟ ಮಾಡುತ್ತಿರುತ್ತಾರೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ತನಿಖಾ ಕಾರ್ಯ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಡಿವೈಎಸ್ಪಿ ರಮೇಶ್, ನಿರೀಕ್ಷಕ ಆರ್.ಎಫ್. ದೇಸಾಯಿ, ಪಿಎಸ್ಐ ಸತೀಶ್ನಾಯ್ಕ, ಬಸವರಾಜ, ದರೆಪ್ಪ ದೊಡ್ಡಮನಿ ಸೇರಿದಂತೆ ಹೆಡ್ಕಾನ್ಸ್ಟೆಬಲ್ಗಳು ಗಸ್ತಿನ ವೇಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ನಗರದ ವಿವಿಧೆಡೆ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಏಳು ಮಂದಿಯನ್ನು ಬಂಧಿಸಿರುವ ಪೊಲೀಸರು ಪ್ರತ್ಯೇಕ ನಾಲ್ಕು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.</p>.<p>ಗುರುವಾರ ಸಂಜೆ ಗಸ್ತಿನಲ್ಲಿದ್ದ ಪೊಲೀಸರು ನಗರದ ಸರ್ಕಾರಿ, ಖಾಸಗಿ ಬಸ್ ನಿಲ್ದಾಣ, ಪಾವಗಡ ರಸ್ತೆಯ ರೈಲ್ವೆ ಗೇಟ್, ಚಿತ್ರದುರ್ಗ ರಸ್ತೆಯ ಅರಣ್ಯ ಪ್ರದೇಶ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಆರೋಪಿಗಳನ್ನು ಬಂಧಿಸದ್ದಾರೆ.</p>.<p>ಆರೋಪಿಗಳಲ್ಲಿ ಒಬ್ಬ ಡಿಪ್ಲೊಮಾ, ಮತ್ತೊಬ್ಬ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ಉಳಿದವರು ಎಸ್ಸೆಎಸ್ಸೆಲ್ಸಿ ಓದುತ್ತಿದ್ದಾರೆ.</p>.<p>‘ಅಮಲಿನಲ್ಲಿದ್ದ ಏಳು ಮಂದಿಯನ್ನು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಕಾರಣ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಆಂಧ್ರಪ್ರದೇಶದ ರಾಯದುರ್ಗ, ಕಲ್ಯಾಣದುರ್ಗ, ಆನಂತಪುರದ ಕೆಲ ವ್ಯಕ್ತಿಗಳು, ದಿನ ಬಿಟ್ಟು ದಿನ ಗಾಂಜಾ ತಂದು ನಗರದ ರೈಲ್ವೆ ನಿಲ್ದಾಣದ ಬಳಿ ಸಣ್ಣ ಚೀಟಿಯಲ್ಲಿ ಗಾಂಜಾ ಇಟ್ಟು ₹ 500ಕ್ಕೆ ಯುವಕರಿಗೆ ಮಾರಾಟ ಮಾಡುತ್ತಿರುತ್ತಾರೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ತನಿಖಾ ಕಾರ್ಯ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಡಿವೈಎಸ್ಪಿ ರಮೇಶ್, ನಿರೀಕ್ಷಕ ಆರ್.ಎಫ್. ದೇಸಾಯಿ, ಪಿಎಸ್ಐ ಸತೀಶ್ನಾಯ್ಕ, ಬಸವರಾಜ, ದರೆಪ್ಪ ದೊಡ್ಡಮನಿ ಸೇರಿದಂತೆ ಹೆಡ್ಕಾನ್ಸ್ಟೆಬಲ್ಗಳು ಗಸ್ತಿನ ವೇಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>