<p><strong>ಚಿತ್ರದುರ್ಗ</strong>: ಶೌಚಾಲಯ ಶುಚಿಗೊಳಿಸುವ ಆಸಿಡ್ 2ನೇ ತರಗತಿಯ ಬಾಲಕಿಯ ಮೇಲೆ ಬಿದ್ದು, ಗಾಯಗೊಂಡಿರುವ ಘಟನೆ ತಾಲ್ಲೂಕಿನ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದಿದೆ.</p>.<p>ಗಾಯಗೊಂಡಿರುವ ಬಾಲಕಿ ಸಿಂಚನಾ (8) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮುಖ್ಯ ಶಿಕ್ಷಕ ಜಿ.ರಂಗಸ್ವಾಮಿ ಅವರೇ ಆಸಿಡ್ ಎರಚಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<div><blockquote>ಮಗುವಿನ ಮೇಲೆ ಆಸಿಡ್ ಆಕಸ್ಮಿಕವಾಗಿ ಬಿದ್ದಿದೆ. ಚಿಕಿತ್ಸೆಯ ಬಳಿಕ ಬಾಲಕಿ ಚೇತರಿಸಿಕೊಂಡಿದ್ದಾಳೆ. ಗ್ರಾಮಸ್ಥರೊಂದಿಗೆ ಶಿಕ್ಷಕರ ಬಾಂಧವ್ಯ ಸರಿಯಿಲ್ಲದ ಕಾರಣ ಆರೋಪ ಮಾಡಲಾಗುತ್ತಿದೆ. </blockquote><span class="attribution">ನಾಗಭೂಷಣ್, ಬಿಇಒ, ಚಿತ್ರದುರ್ಗ</span></div>.<p>‘ದಸರಾ ರಜೆ ಮುಗಿದು ಬುಧವಾರದಿಂದ ಶಾಲೆ ಪ್ರಾರಂಭವಾಗಿತ್ತು. ಶಾಲಾ ಸಿಬ್ಬಂದಿ ಶೌಚಾಲಯ ಶುಚಿಗೊಳಿಸುವ ವೇಳೆ ಬಾಲಕಿಯ ಮೇಲೆ ಆಕಸ್ಮಿಕವಾಗಿ ಆಸಿಡ್ ಬಿದ್ದಿದೆ. ಬೆನ್ನ ಮೇಲೆ ಬೊಬ್ಬೆ ಎದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ’ ಎಂದು ತಾಲ್ಲೂಕು ಶಿಕ್ಷಣಾಧಿಕಾರಿ ನಾಗಭೂಷಣ್ ತಿಳಿಸಿದ್ದಾರೆ.</p>.<p>‘ಶೌಚಾಲಯ ಶುಚಿಗೊಳಿಸಲು ಬಾಲಕಿಯನ್ನು ಒತ್ತಾಯಿಸಲಾಗಿತ್ತು. ಇದನ್ನು ನಿರಾಕರಿಸಿದ ಮಗುವಿನ ಮೇಲೆ ಮುಖ್ಯ ಶಿಕ್ಷಕ ಆಸಿಡ್ ಎರಚಿದ್ದಾರೆ. ಅವರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಶೌಚಾಲಯ ಶುಚಿಗೊಳಿಸುವ ಆಸಿಡ್ 2ನೇ ತರಗತಿಯ ಬಾಲಕಿಯ ಮೇಲೆ ಬಿದ್ದು, ಗಾಯಗೊಂಡಿರುವ ಘಟನೆ ತಾಲ್ಲೂಕಿನ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದಿದೆ.</p>.<p>ಗಾಯಗೊಂಡಿರುವ ಬಾಲಕಿ ಸಿಂಚನಾ (8) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮುಖ್ಯ ಶಿಕ್ಷಕ ಜಿ.ರಂಗಸ್ವಾಮಿ ಅವರೇ ಆಸಿಡ್ ಎರಚಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<div><blockquote>ಮಗುವಿನ ಮೇಲೆ ಆಸಿಡ್ ಆಕಸ್ಮಿಕವಾಗಿ ಬಿದ್ದಿದೆ. ಚಿಕಿತ್ಸೆಯ ಬಳಿಕ ಬಾಲಕಿ ಚೇತರಿಸಿಕೊಂಡಿದ್ದಾಳೆ. ಗ್ರಾಮಸ್ಥರೊಂದಿಗೆ ಶಿಕ್ಷಕರ ಬಾಂಧವ್ಯ ಸರಿಯಿಲ್ಲದ ಕಾರಣ ಆರೋಪ ಮಾಡಲಾಗುತ್ತಿದೆ. </blockquote><span class="attribution">ನಾಗಭೂಷಣ್, ಬಿಇಒ, ಚಿತ್ರದುರ್ಗ</span></div>.<p>‘ದಸರಾ ರಜೆ ಮುಗಿದು ಬುಧವಾರದಿಂದ ಶಾಲೆ ಪ್ರಾರಂಭವಾಗಿತ್ತು. ಶಾಲಾ ಸಿಬ್ಬಂದಿ ಶೌಚಾಲಯ ಶುಚಿಗೊಳಿಸುವ ವೇಳೆ ಬಾಲಕಿಯ ಮೇಲೆ ಆಕಸ್ಮಿಕವಾಗಿ ಆಸಿಡ್ ಬಿದ್ದಿದೆ. ಬೆನ್ನ ಮೇಲೆ ಬೊಬ್ಬೆ ಎದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ’ ಎಂದು ತಾಲ್ಲೂಕು ಶಿಕ್ಷಣಾಧಿಕಾರಿ ನಾಗಭೂಷಣ್ ತಿಳಿಸಿದ್ದಾರೆ.</p>.<p>‘ಶೌಚಾಲಯ ಶುಚಿಗೊಳಿಸಲು ಬಾಲಕಿಯನ್ನು ಒತ್ತಾಯಿಸಲಾಗಿತ್ತು. ಇದನ್ನು ನಿರಾಕರಿಸಿದ ಮಗುವಿನ ಮೇಲೆ ಮುಖ್ಯ ಶಿಕ್ಷಕ ಆಸಿಡ್ ಎರಚಿದ್ದಾರೆ. ಅವರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>