<p><strong>ಹಿರಿಯೂರು:</strong> ‘ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿಯೇ ಇ–ಸ್ವತ್ತು ಮಾಡಿಕೊಡಲು ಎಲ್ಲ ವ್ಯವಸ್ಥೆ ಇದ್ದರೂ ಪಿಡಿಒಗಳು, ಜನರನ್ನು ನಗರ ಪ್ರದೇಶದಲ್ಲಿ ತಮ್ಮ ಜತೆ ಹೊಂದಾಣಿಕೆ ಇರುವ ಕಂಪ್ಯೂಟರ್ ಕೇಂದ್ರಗಳಿಗೆ ಕಳಿಸುತ್ತಿರುವುದೇಕೆ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಪ್ರಶ್ನಿಸಿದರು.</p>.<p>ನಗರದ ಸಾಮರ್ಥ್ಯ ಸೌಧದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಿಡಿಒ ಹಾಗೂ ಕುಡಿಯುವ ನೀರು ಸರಬರಾಜು ಇಲಾಖೆ ಎಂಜಿನಿಯರ್ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಎಲ್ಲ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಕಂಪ್ಯೂಟರ್ ಆಪರೇಟರ್ಗಳಿದ್ದಾರೆ. ಹೀಗಿದ್ದರೂ ಇ–ಸ್ವತ್ತಿಗೆ ಅರ್ಜಿ ಸಲ್ಲಿಸಲು ನಗರ ಪ್ರದೇಶಗಳಿಗೆ ಕಳಿಸುತ್ತಿರುವ ಹಿಂದಿನ ಮರ್ಮವೇನು? ಯಾರಿಗಾದರೂ ತರಬೇತಿ ಅಗತ್ಯವಿದ್ದಲ್ಲಿ ಕೊಡಿಸಿ. ಇ–ಸ್ವತ್ತಿಗೆ ಅಲೆದಾಡಿಸಬೇಡಿ ಎಂದು ಅಧ್ಯಕ್ಷರು ಪಿಡಿಒಗಳಿಗೆ ತಾಕೀತು ಮಾಡಿದರು.</p>.<p>ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ರಸ್ತೆ, ಚರಂಡಿ ಸೇರಿ ಯಾವುದೇ ಅಭಿವೃದ್ಧಿ ಮಾಡದಿದ್ದರೂ, ನಿವೇಶನಗಳಿಗೆ ಇ–ಸ್ವತ್ತು ಮಾಡಿಕೊಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸದಸ್ಯ ಆರ್. ನಾಗೇಂದ್ರನಾಯ್ಕ್ ಒತ್ತಾಯಿಸಿದರು.</p>.<p>‘ಐಮಂಗಲ ಹೋಬಳಿಯ ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಜುಲೈ ತಿಂಗಳಲ್ಲಿಯೇ ನೀರು ಕೊಡುತ್ತೇವೆ ಎಂದವರು, ನವೆಂಬರ್ ಮುಗಿದರೂ ಏಕೆ ಕೊಟ್ಟಿಲ್ಲ’ ಎಂದು ಶಶಿಕಲಾ ನೀರು ಸರಬರಾಜು ಎಂಜಿನಿಯರ್ಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ಇಲಾಖೆ ಎಇಇ ರಾಮಚಂದ್ರಪ್ಪ, ‘ಕುಡಿಯುವ ನೀರು ಯೋಜನೆಯ ಪ್ರಾಯೋಗಿಕ ಹಂತ ಮುಗಿದಿದೆ. ಕೋವೇರಹಟ್ಟಿ ಕ್ರಾಸ್ ಹತ್ತಿರ ಭದ್ರಾ ಯೋಜನೆ ಕಾಮಗಾರಿ ನಡೆಸುವವರು ಪೈಪ್ಲೈನ್ ಒಡೆದಿದ್ದು, ದುರಸ್ತಿ ಬಳಿಕ ನೀರು ಬಿಡುತ್ತೇವೆ’ ಎಂದರು.</p>.<p>‘ಗ್ರಾಮ ಪಂಚಾಯಿತಿಗಳಲ್ಲಿ 15 ನೇ ಹಣಕಾಸು ಯೋಜನೆ ಅನುಮೋದನೆ ಆಗಿದ್ದರೂ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಸ್ವಚ್ಛತೆ ನಿರ್ವಹಣೆ ಆಗುತ್ತಿಲ್ಲ’ ಎಂದು ಅಧ್ಯಕ್ಷರು ಆಕ್ಷೇಪಿಸಿದಾಗ, ‘ಕೆಲವೊಂದು ತಾಂತ್ರಿಕ ಸಮಸ್ಯೆಗಳಿದ್ದು, ಸರಿಪಡಿಸಲಾಗಿದೆ. ಮೂರ್ನಾಲ್ಕು ದಿನದಲ್ಲಿ ಕಾಮಗಾರಿಗಳು ಆರಂಭವಾಗಲಿವೆ’ ಎಂದು ಇಒ ಹನುಮಂತಪ್ಪ ಹೇಳಿದರು.</p>.<p>‘ಪಿಡಿಒಗಳಿಗೆ ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ. ಹಲವೆಡೆ ಪಿಡಿಒಗಳ ವರ್ಗಾವಣೆಯಿಂದ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ’ ಎಂದು ಸದಸ್ಯೆ ರಾಜೇಶ್ವರಿ ಆರೋಪಿಸಿದರು.</p>.<p>‘ಗ್ರಾಮ ಪಂಚಾಯಿತಿಗಳಲ್ಲಿ ಗ್ರೇಡ್–2 ಕಾರ್ಯದರ್ಶಿಗಳಿಗೆ ಪಿಡಿಒ ಹುದ್ದೆ ನೀಡಲು ಅವಕಾಶ ಇಲ್ಲದಿದ್ದರೂ ನಮ್ಮ ತಾಲ್ಲೂಕಿನಲ್ಲಿ ನೀಡಲಾಗಿದೆ’ ಎಂದು ನಾಗೇಂದ್ರನಾಯ್ಕ್ ಆರೋಪಿಸಿದರು.</p>.<p>‘ತಾಲ್ಲೂಕಿನಲ್ಲಿ ಎರಡು ಪಂಚಾಯಿತಿಗಳಲ್ಲಿ ಮಾತ್ರ ಪ್ರಭಾರ ಪಿಡಿಒಗಳಿದ್ದಾರೆ’ ಎಂದು ಇಒ ಸ್ಪಷ್ಟನೆ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ತ್ರಿವೇಣಿ ಶಿವಪ್ರಸಾದಗೌಡ, ಗೀತಾನಾಗಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಿ, ಉಪಾಧ್ಯಕ್ಷೆ ಪುಷ್ಪಾರಂಗನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಓಂಕಾರಪ್ಪ, ಇಒ ಹನುಮಂತಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ‘ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿಯೇ ಇ–ಸ್ವತ್ತು ಮಾಡಿಕೊಡಲು ಎಲ್ಲ ವ್ಯವಸ್ಥೆ ಇದ್ದರೂ ಪಿಡಿಒಗಳು, ಜನರನ್ನು ನಗರ ಪ್ರದೇಶದಲ್ಲಿ ತಮ್ಮ ಜತೆ ಹೊಂದಾಣಿಕೆ ಇರುವ ಕಂಪ್ಯೂಟರ್ ಕೇಂದ್ರಗಳಿಗೆ ಕಳಿಸುತ್ತಿರುವುದೇಕೆ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಪ್ರಶ್ನಿಸಿದರು.</p>.<p>ನಗರದ ಸಾಮರ್ಥ್ಯ ಸೌಧದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಿಡಿಒ ಹಾಗೂ ಕುಡಿಯುವ ನೀರು ಸರಬರಾಜು ಇಲಾಖೆ ಎಂಜಿನಿಯರ್ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಎಲ್ಲ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಕಂಪ್ಯೂಟರ್ ಆಪರೇಟರ್ಗಳಿದ್ದಾರೆ. ಹೀಗಿದ್ದರೂ ಇ–ಸ್ವತ್ತಿಗೆ ಅರ್ಜಿ ಸಲ್ಲಿಸಲು ನಗರ ಪ್ರದೇಶಗಳಿಗೆ ಕಳಿಸುತ್ತಿರುವ ಹಿಂದಿನ ಮರ್ಮವೇನು? ಯಾರಿಗಾದರೂ ತರಬೇತಿ ಅಗತ್ಯವಿದ್ದಲ್ಲಿ ಕೊಡಿಸಿ. ಇ–ಸ್ವತ್ತಿಗೆ ಅಲೆದಾಡಿಸಬೇಡಿ ಎಂದು ಅಧ್ಯಕ್ಷರು ಪಿಡಿಒಗಳಿಗೆ ತಾಕೀತು ಮಾಡಿದರು.</p>.<p>ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ರಸ್ತೆ, ಚರಂಡಿ ಸೇರಿ ಯಾವುದೇ ಅಭಿವೃದ್ಧಿ ಮಾಡದಿದ್ದರೂ, ನಿವೇಶನಗಳಿಗೆ ಇ–ಸ್ವತ್ತು ಮಾಡಿಕೊಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸದಸ್ಯ ಆರ್. ನಾಗೇಂದ್ರನಾಯ್ಕ್ ಒತ್ತಾಯಿಸಿದರು.</p>.<p>‘ಐಮಂಗಲ ಹೋಬಳಿಯ ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಜುಲೈ ತಿಂಗಳಲ್ಲಿಯೇ ನೀರು ಕೊಡುತ್ತೇವೆ ಎಂದವರು, ನವೆಂಬರ್ ಮುಗಿದರೂ ಏಕೆ ಕೊಟ್ಟಿಲ್ಲ’ ಎಂದು ಶಶಿಕಲಾ ನೀರು ಸರಬರಾಜು ಎಂಜಿನಿಯರ್ಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ಇಲಾಖೆ ಎಇಇ ರಾಮಚಂದ್ರಪ್ಪ, ‘ಕುಡಿಯುವ ನೀರು ಯೋಜನೆಯ ಪ್ರಾಯೋಗಿಕ ಹಂತ ಮುಗಿದಿದೆ. ಕೋವೇರಹಟ್ಟಿ ಕ್ರಾಸ್ ಹತ್ತಿರ ಭದ್ರಾ ಯೋಜನೆ ಕಾಮಗಾರಿ ನಡೆಸುವವರು ಪೈಪ್ಲೈನ್ ಒಡೆದಿದ್ದು, ದುರಸ್ತಿ ಬಳಿಕ ನೀರು ಬಿಡುತ್ತೇವೆ’ ಎಂದರು.</p>.<p>‘ಗ್ರಾಮ ಪಂಚಾಯಿತಿಗಳಲ್ಲಿ 15 ನೇ ಹಣಕಾಸು ಯೋಜನೆ ಅನುಮೋದನೆ ಆಗಿದ್ದರೂ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಸ್ವಚ್ಛತೆ ನಿರ್ವಹಣೆ ಆಗುತ್ತಿಲ್ಲ’ ಎಂದು ಅಧ್ಯಕ್ಷರು ಆಕ್ಷೇಪಿಸಿದಾಗ, ‘ಕೆಲವೊಂದು ತಾಂತ್ರಿಕ ಸಮಸ್ಯೆಗಳಿದ್ದು, ಸರಿಪಡಿಸಲಾಗಿದೆ. ಮೂರ್ನಾಲ್ಕು ದಿನದಲ್ಲಿ ಕಾಮಗಾರಿಗಳು ಆರಂಭವಾಗಲಿವೆ’ ಎಂದು ಇಒ ಹನುಮಂತಪ್ಪ ಹೇಳಿದರು.</p>.<p>‘ಪಿಡಿಒಗಳಿಗೆ ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ. ಹಲವೆಡೆ ಪಿಡಿಒಗಳ ವರ್ಗಾವಣೆಯಿಂದ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ’ ಎಂದು ಸದಸ್ಯೆ ರಾಜೇಶ್ವರಿ ಆರೋಪಿಸಿದರು.</p>.<p>‘ಗ್ರಾಮ ಪಂಚಾಯಿತಿಗಳಲ್ಲಿ ಗ್ರೇಡ್–2 ಕಾರ್ಯದರ್ಶಿಗಳಿಗೆ ಪಿಡಿಒ ಹುದ್ದೆ ನೀಡಲು ಅವಕಾಶ ಇಲ್ಲದಿದ್ದರೂ ನಮ್ಮ ತಾಲ್ಲೂಕಿನಲ್ಲಿ ನೀಡಲಾಗಿದೆ’ ಎಂದು ನಾಗೇಂದ್ರನಾಯ್ಕ್ ಆರೋಪಿಸಿದರು.</p>.<p>‘ತಾಲ್ಲೂಕಿನಲ್ಲಿ ಎರಡು ಪಂಚಾಯಿತಿಗಳಲ್ಲಿ ಮಾತ್ರ ಪ್ರಭಾರ ಪಿಡಿಒಗಳಿದ್ದಾರೆ’ ಎಂದು ಇಒ ಸ್ಪಷ್ಟನೆ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ತ್ರಿವೇಣಿ ಶಿವಪ್ರಸಾದಗೌಡ, ಗೀತಾನಾಗಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಿ, ಉಪಾಧ್ಯಕ್ಷೆ ಪುಷ್ಪಾರಂಗನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಓಂಕಾರಪ್ಪ, ಇಒ ಹನುಮಂತಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>