<p><strong>ಚಳ್ಳಕೆರೆ:</strong> ‘ಬಯಲುಸೀಮೆ ಪ್ರದೇಶದಲ್ಲಿ ಶೇಂಗಾದ ಜತೆ ಸೂರ್ಯಕಾಂತಿ, ಎಳ್ಳು, ಕುಸುಮೆ ಮುಂತಾದ ಎಣ್ಣೆಕಾಳು ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಮೂಲಕ ರೈತರು ಆರ್ಥಿಕವಾಗಿ ಸದೃಢರಾಗಬೇಕು’ ಎಂದು ಹೈದರಬಾದ್ ರಾಷ್ಟ್ರೀಯ ಎಣ್ಣೆಕಾಳು ಅಭಿವೃದ್ಧಿ ಕೇಂದ್ರದ ವಿಜ್ಞಾನಿ ಡಾ.ಮಂಜುನಾಥ್ ಕಿವಿಮಾತು ಹೇಳಿದರು.</p>.<p>ನಗರದ ಕೃಷಿ ಸಹಾಯಕ ನಿರ್ದೇಶಕರ ಕಚೇರಿ ಆವರಣದಲ್ಲಿ ಸೋಮವಾರ ಆತ್ಮ ಯೋಜನೆಯಡಿ ಆಯೋಜಿಸಿದ್ದ ತರಬೇತಿ, ಮುಂಗಾರು ಹಂಗಾಮಿನ ಕಾರ್ಯಾಗಾರ ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಣ್ಣೆಕಾಳು ಬೆಳೆಗೆ ಹೆಚ್ಚು ನೀರಿನ ಅಗತ್ಯ ಇಲ್ಲ. ಹೀಗಾಗಿ, ನೀರಾವರಿ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳ ಮಧ್ಯೆ ಎಣ್ಣೆಕಾಳು ಬೆಳೆಯಲು ಅವಕಾಶವಿದೆ’ ಎಂದು ಹೇಳಿದರು.</p>.<p>‘ಪ್ರತಿ ವರ್ಷ ಒಂದೇ ಬೆಳೆ ಬೆಳೆದರೆ ಆ ಬೆಳೆ ಹೆಚ್ಚು ಇಳುವರಿ ನೀಡುವುದಿಲ್ಲ. ಹಾಗಾಗಿ ಶೇಂಗಾದ ಬದಲಿಗೆ ಪರ್ಯಾಯ ಬೆಳೆಗಳಾದ ಸಜ್ಜೆ, ಜೋಳ, ನವಣೆ, ಸಿರಿಧಾನ್ಯ ಮತ್ತು ಹೆಸರು, ತೊಗರಿ, ಔಡಲ ಮುಂತಾದ ಅಕ್ಕಡಿ ಬೆಳೆಗಳನ್ನು ಬೆಳೆಯುವುದರ ಕಡೆಗೆ ಹೆಚ್ಚು ಗಮನರಿಸಬೇಕು’ ಎಂದು ಶಾಸಕ ಟಿ.ರಘುಮೂರ್ತಿ ರೈತರಿಗೆ ಸಲಹೆ ನೀಡಿದರು.</p>.<p>ಚಿತ್ರದುರ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ್, ರೈತ ಮುಖಂಡ ಕೆ.ಪಿ.ಭೂತಯ್ಯ, ರೈತ ಮುಖಂಡ ರೆಡ್ಡಿಹಳ್ಳಿ ವೀರಣ್ಣ, ಬಬ್ಬೂರು ಫಾರಂ ಕೃಷಿ ವಿಜ್ಞಾನಿ ಡಾ.ಓಂಕಾರಪ್ಪ, ಚಿತ್ರದುರ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ. ಮಂಜುನಾಥ್ ಮಾತನಾಡಿದರು.</p>.<p>ಪ್ರಗತಿಪರ ರೈತ ಆರ್.ಎ.ದಯಾನಂದಮೂರ್ತಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಶೋಕ್, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಸ್.ರೇವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ‘ಬಯಲುಸೀಮೆ ಪ್ರದೇಶದಲ್ಲಿ ಶೇಂಗಾದ ಜತೆ ಸೂರ್ಯಕಾಂತಿ, ಎಳ್ಳು, ಕುಸುಮೆ ಮುಂತಾದ ಎಣ್ಣೆಕಾಳು ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಮೂಲಕ ರೈತರು ಆರ್ಥಿಕವಾಗಿ ಸದೃಢರಾಗಬೇಕು’ ಎಂದು ಹೈದರಬಾದ್ ರಾಷ್ಟ್ರೀಯ ಎಣ್ಣೆಕಾಳು ಅಭಿವೃದ್ಧಿ ಕೇಂದ್ರದ ವಿಜ್ಞಾನಿ ಡಾ.ಮಂಜುನಾಥ್ ಕಿವಿಮಾತು ಹೇಳಿದರು.</p>.<p>ನಗರದ ಕೃಷಿ ಸಹಾಯಕ ನಿರ್ದೇಶಕರ ಕಚೇರಿ ಆವರಣದಲ್ಲಿ ಸೋಮವಾರ ಆತ್ಮ ಯೋಜನೆಯಡಿ ಆಯೋಜಿಸಿದ್ದ ತರಬೇತಿ, ಮುಂಗಾರು ಹಂಗಾಮಿನ ಕಾರ್ಯಾಗಾರ ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಣ್ಣೆಕಾಳು ಬೆಳೆಗೆ ಹೆಚ್ಚು ನೀರಿನ ಅಗತ್ಯ ಇಲ್ಲ. ಹೀಗಾಗಿ, ನೀರಾವರಿ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳ ಮಧ್ಯೆ ಎಣ್ಣೆಕಾಳು ಬೆಳೆಯಲು ಅವಕಾಶವಿದೆ’ ಎಂದು ಹೇಳಿದರು.</p>.<p>‘ಪ್ರತಿ ವರ್ಷ ಒಂದೇ ಬೆಳೆ ಬೆಳೆದರೆ ಆ ಬೆಳೆ ಹೆಚ್ಚು ಇಳುವರಿ ನೀಡುವುದಿಲ್ಲ. ಹಾಗಾಗಿ ಶೇಂಗಾದ ಬದಲಿಗೆ ಪರ್ಯಾಯ ಬೆಳೆಗಳಾದ ಸಜ್ಜೆ, ಜೋಳ, ನವಣೆ, ಸಿರಿಧಾನ್ಯ ಮತ್ತು ಹೆಸರು, ತೊಗರಿ, ಔಡಲ ಮುಂತಾದ ಅಕ್ಕಡಿ ಬೆಳೆಗಳನ್ನು ಬೆಳೆಯುವುದರ ಕಡೆಗೆ ಹೆಚ್ಚು ಗಮನರಿಸಬೇಕು’ ಎಂದು ಶಾಸಕ ಟಿ.ರಘುಮೂರ್ತಿ ರೈತರಿಗೆ ಸಲಹೆ ನೀಡಿದರು.</p>.<p>ಚಿತ್ರದುರ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ್, ರೈತ ಮುಖಂಡ ಕೆ.ಪಿ.ಭೂತಯ್ಯ, ರೈತ ಮುಖಂಡ ರೆಡ್ಡಿಹಳ್ಳಿ ವೀರಣ್ಣ, ಬಬ್ಬೂರು ಫಾರಂ ಕೃಷಿ ವಿಜ್ಞಾನಿ ಡಾ.ಓಂಕಾರಪ್ಪ, ಚಿತ್ರದುರ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ. ಮಂಜುನಾಥ್ ಮಾತನಾಡಿದರು.</p>.<p>ಪ್ರಗತಿಪರ ರೈತ ಆರ್.ಎ.ದಯಾನಂದಮೂರ್ತಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಶೋಕ್, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಸ್.ರೇವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>