ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೊಸಹಳ್ಳಿ ಪಾಳ್ಯದ ಕುರುಬ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ, ತಮ್ಮ ಮನೆ ಗೃಹಪ್ರವೇಶಕ್ಕೆ ಮುದ್ದುಲಿಂಗೇಶ್ವರ ದೇವರನ್ನು ಪಲ್ಲಕ್ಕಿಯಲ್ಲಿ ಕರೆದುಕೊಂಡು ಹೊರಟಿದ್ದಾರೆ. ಈ ಸಂದರ್ಭದಲ್ಲಿ ನಾಯಕ ಸಮಾಜದವರು, ‘ಮುದ್ದುಲಿಂಗೇಶ್ವರ ದೇಗುಲದ ಆಡಳಿತದಲ್ಲಿ ನಮಗೂ ಅಧಿಕಾರವಿದೆ. ಆದರೆ, ನಮ್ಮನ್ನು ನಿರ್ಲಕ್ಷಿಸಿ ದೇವರನ್ನು ಗ್ರಾಮದ ಹೊರಗೆ ತೆಗೆದುಕೊಂಡು ಹೋಗುತ್ತಿರುವುದು ಸರಿಯಲ್ಲ’ ಎಂದು ಪ್ರಶ್ನಿಸಿದ್ದಾರೆ.