ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಹತ್ಯೆ, ಲವ್ ಜಿಹಾದ್ ನಿಷೇಧ ಖಚಿತ: ಕೆ.ಎಸ್‌ ಈಶ್ವರಪ್ಪ

ಕೋಟೆನಗರಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ
Last Updated 6 ಡಿಸೆಂಬರ್ 2020, 16:32 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಗೋಹತ್ಯೆ, ಲವ್‌ ಜಿಹಾದ್‌ ಎರಡನ್ನೂ ಮುಂಬರುವ ಅಧಿವೇಶನದಲ್ಲಿ ಖಂಡಿತ ನಿಷೇಧಿಸುತ್ತೇವೆ’ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಇಲ್ಲಿನ ಕನಕ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೋಹತ್ಯೆ ಮತ್ತು ಲವ್ ಜಿಹಾದ್ ನಿಷೇಧಿಸುವ ಬಗ್ಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ತೀರ್ಮಾನ ತೆಗೆದುಕೊಂಡಿದೆ. ಇದಕ್ಕಾಗಿ ಎಲ್ಲಾ ದಾಖಲೆ ಸಂಗ್ರಹಿಸುತ್ತಿದ್ದೇವೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದರು.

‘ಕುಮಾರಸ್ವಾಮಿ ಅವರಿಗೆ ಬಹಳ‌ ತಡವಾಗಿ ಜ್ಞಾನೋದಯವಾಗಿದೆ. ಬಿಜೆಪಿ ಜತೆ ಸಖ್ಯ ಬೆಳೆಸಿದ್ದರೆ ಅವರನ್ನೇ ಒಂದು ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಸುತ್ತಿದ್ದೆವು. ರಾಜಕಾರಣ ಎಂಬುದು ಚಕ್ರವಿದ್ದಂತೆ ತಿರುಗುವುದು ಸಾಮಾನ್ಯ’ ಎಂದು ಹೇಳಿದರು.

‘ಸಿ.ಪಿ. ಯೋಗಿಶ್ವರ್‌ಗೆ ಸಚಿವ ಸ್ಥಾನ ನೀಡುವ ವಿಚಾರ ನನಗೆ ಗೊತ್ತಿಲ್ಲ. ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರದ ನಾಯಕರು ಹಾಗೂ ಮುಖ್ಯಮಂತ್ರಿ ಅವರೇ ತೀರ್ಮಾನಿಸಲಿದ್ದಾರೆ. ಈ ಬಗ್ಗೆ ನನಗೇನು ತಿಳಿದಿಲ್ಲ’ ಎಂದು ಪಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT