ಗೋಹತ್ಯೆ, ಲವ್ ಜಿಹಾದ್ ನಿಷೇಧ ಖಚಿತ: ಕೆ.ಎಸ್ ಈಶ್ವರಪ್ಪ
ಚಿತ್ರದುರ್ಗ: ‘ಗೋಹತ್ಯೆ, ಲವ್ ಜಿಹಾದ್ ಎರಡನ್ನೂ ಮುಂಬರುವ ಅಧಿವೇಶನದಲ್ಲಿ ಖಂಡಿತ ನಿಷೇಧಿಸುತ್ತೇವೆ’ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಇಲ್ಲಿನ ಕನಕ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೋಹತ್ಯೆ ಮತ್ತು ಲವ್ ಜಿಹಾದ್ ನಿಷೇಧಿಸುವ ಬಗ್ಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ತೀರ್ಮಾನ ತೆಗೆದುಕೊಂಡಿದೆ. ಇದಕ್ಕಾಗಿ ಎಲ್ಲಾ ದಾಖಲೆ ಸಂಗ್ರಹಿಸುತ್ತಿದ್ದೇವೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದರು.
‘ಕುಮಾರಸ್ವಾಮಿ ಅವರಿಗೆ ಬಹಳ ತಡವಾಗಿ ಜ್ಞಾನೋದಯವಾಗಿದೆ. ಬಿಜೆಪಿ ಜತೆ ಸಖ್ಯ ಬೆಳೆಸಿದ್ದರೆ ಅವರನ್ನೇ ಒಂದು ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಸುತ್ತಿದ್ದೆವು. ರಾಜಕಾರಣ ಎಂಬುದು ಚಕ್ರವಿದ್ದಂತೆ ತಿರುಗುವುದು ಸಾಮಾನ್ಯ’ ಎಂದು ಹೇಳಿದರು.
‘ಸಿ.ಪಿ. ಯೋಗಿಶ್ವರ್ಗೆ ಸಚಿವ ಸ್ಥಾನ ನೀಡುವ ವಿಚಾರ ನನಗೆ ಗೊತ್ತಿಲ್ಲ. ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರದ ನಾಯಕರು ಹಾಗೂ ಮುಖ್ಯಮಂತ್ರಿ ಅವರೇ ತೀರ್ಮಾನಿಸಲಿದ್ದಾರೆ. ಈ ಬಗ್ಗೆ ನನಗೇನು ತಿಳಿದಿಲ್ಲ’ ಎಂದು ಪಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.