ಹಿರಿಯೂರು: ವಾಹನವೊಂದು ಡಿಕ್ಕಿ ಹೊಡೆದಿದ್ದರಿಂದ, ರಸ್ತೆ ದಾಟುತ್ತಿದ್ದ ಕೃಷ್ಣಮೃಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಳ್ಳಕೆರೆ ರಸ್ತೆಯಲ್ಲಿರುವ ಗನ್ನಾಯಕನಹಳ್ಳಿ ಗೇಟ್ ಸಮೀಪ ಬುಧವಾರ ನಡೆದಿದೆ.
ಅಪಘಾತದಲ್ಲಿ ಸುಮಾರು ನಾಲ್ಕು ವರ್ಷ ಪ್ರಾಯದ ಕೃಷ್ಣಮೃಗ ಮೃತಪಟ್ಟಿದೆ ಎಂದು ವಲಯ ಅರಣ್ಯಾಧಿಕಾರಿ ಶಶಿಧರ್ ತಿಳಿಸಿದ್ದಾರೆ.
ಬಯಲುಸೀಮೆ ಪ್ರದೇಶದಲ್ಲಿ ಇವುಗಳ ಸಂಖ್ಯೆ ಅಧಿಕವಾಗಿದ್ದು, ಹಿರಿಯೂರು ತಾಲ್ಲೂಕಿನ ಚಳ್ಳಕೆರೆ ರಸ್ತೆಯಲ್ಲಿನ ಹಳ್ಳಿಗಳಾದ ಬಬ್ಬೂರು, ಗೌಡನಹಳ್ಳಿ, ಪಿಲ್ಲಾಲಿ, ಹೂವಿನಹೊಳೆ, ಈಶ್ವರಗೆರೆ ಮೊದಲಾದ ಗ್ರಾಮಗಳಲ್ಲಿ ಕೃಷ್ಣಮೃಗಗಳು ಹೆಚ್ಚಾಗಿ ಕಂಡುಬರುತ್ತವೆ.