ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿಗೆ 37,915 ಹೆಕ್ಟೇರ್ ಸಾಮಾನ್ಯ ಬಿತ್ತನೆ ಗುರಿ ಇದ್ದು, ಈ ಬಾರಿ 236 ಹೆಕ್ಟೇರ್ ಹತ್ತಿ ಮಾತ್ರ ಬಿತ್ತನೆ ಮಾಡಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜದ ದಾಸ್ತಾನು ಮಾಡಿಕೊಳ್ಳಲಾಗುತ್ತಿದೆ. ಖಾಸಗಿ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ 2443 ಮೆಟ್ರಿಕ್ ಟನ್ ರಸಗೊಬ್ಬರದ ದಾಸ್ತಾನು ಇದೆ. ರೈತರು ಆತಂಕ ಪಡುವ ಅಗತ್ಯವಿಲ್ಲ. ಬಿತ್ತನೆ ಬೀಜ ಬೇಕಾದ ರೈತರು ತಮ್ಮ ಎಫ್ಐಡಿ ಅಥವಾ ಆಧಾರ್ ಕಾರ್ಡ್ ತೋರಿಸಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪಡೆಯಬಹುದು ಎಂದು ತಿಳಿಸಿದ್ದಾರೆ.