<p><strong>ಹೊಸದುರ್ಗ</strong> : ಕಳೆದ 15 ದಿನಗಳಿಂದ ಸುರಿದ ಹದ ಮಳೆಯಾಗಿದೆ ತಾಲ್ಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ. ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ಕೃಷಿ ಚಟುವಟಿಕೆಗಳಿಗೆ ಈಗ ಜೀವ ಬಂದಂತಾಗಿದೆ.</p>.<p>ಈಗಾಗಲೇ ಬಿತ್ತನೆಯಾಗಿರುವ ಮೆಕ್ಕೆಜೋಳ, ರಾಗಿ, ಸಾವೆ, ಅವರೆ, ಅಲಸಂದೆ ಸೇರಿದಂತೆ ಹಲವು ಬೆಳೆಗಳಿಗೆ ರೈತರು ಅಂತರ ಬೇಸಾಯ (ಎಡೆಕುಂಟೆ) ಮಾಡುತ್ತಿದ್ದಾರೆ. ಇನ್ನೂ ಭೂಮಿ ಸಿದ್ಧತೆ ಮಾಡಿಕೊಂಡು ಮಳೆಗಾಗಿ ಕಾಯುತ್ತಿದ್ದ ರೈತರು ರಾಗಿ ಬಿತ್ತನೆಯಲ್ಲಿ ತೊಡಗಿದ್ದಾರೆ.</p>.<p>ಎರಡು ತಿಂಗಳ ನಂತರ ಮಳೆ ಬಿದ್ದಿರುವುದರಿಂದ ಈಗಷ್ಟೇ ಬಿತ್ತನೆ ಆರಂಭವಾಗಿದೆ. ಮುಂದೆ ಇದೇ ರೀತಿ ಮಳೆಯಾದರೆ. ಇಲ್ಲಿ ಬೆಳೆ ಕಾಣಬಹುದು. ಇಲ್ಲವಾದರೆ ಜಾನುವಾರುಗಳಿಗೆ ಮೇವು ದೊರಕುವುದು ಕಷ್ಟಕರವಾಗಲಿದೆ ಎನ್ನುತ್ತಾರೆ ಈ ಭಾಗದ ರೈತರು.</p>.<p>ಮಳೆ ಕೈಕೊಟ್ಟಿದ್ದರಿಂದ ರೈತರು ಜಮೀನುಗಳಲ್ಲಿ ಉಳುಮೆ ಮಾಡಲು ಸಾಧ್ಯವಾಗಿರಲಿಲ್ಲ. ಕಳೆದ 15 ದಿನಗಳಿಂದಾದ ಮಳೆಯಿಂದಾಗಿ ಉಳಿಮೆ, ಬಿತ್ತನೆ ಬೀಜ, ಗೊಬ್ಬರ ಟ್ರ್ಯಾಕ್ಟರ್ ಮತ್ತು ಕೂಲಿಯಾಳುಗಳಿಗೆ ಬೇಡಿಕೆ ಹೆಚ್ಚಾಗಿದೆ.</p>.<p>ತಾಲ್ಲೂಕಿನ ಕೆಲವೆಡೆ ರಾಗಿ ಬಿತ್ತನೆ ಕಾರ್ಯ ನಡೆಯುತ್ತಿದೆ. ಬಿತ್ತನೆಯಾಗಿರುವ ಬೆಳೆಗಳಿಗೆ ಅಂತರ ಬೇಸಾಯ ಮೇಲುಗೊಬ್ಬರ, ಕಳೆ ತೆಗೆಯುವ ಕಾರ್ಯ ನಡೆಯುತ್ತಿದೆ. ಮುನ್ನ ಮುಂಗಾರಿನಲ್ಲಿ ಬಿತ್ತನೆಯಾಗಿದ್ದ ಸಾವೆ ಕಟಾವು ನಡೆಯುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಸಿ ಎಸ್ ಈಶ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong> : ಕಳೆದ 15 ದಿನಗಳಿಂದ ಸುರಿದ ಹದ ಮಳೆಯಾಗಿದೆ ತಾಲ್ಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ. ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ಕೃಷಿ ಚಟುವಟಿಕೆಗಳಿಗೆ ಈಗ ಜೀವ ಬಂದಂತಾಗಿದೆ.</p>.<p>ಈಗಾಗಲೇ ಬಿತ್ತನೆಯಾಗಿರುವ ಮೆಕ್ಕೆಜೋಳ, ರಾಗಿ, ಸಾವೆ, ಅವರೆ, ಅಲಸಂದೆ ಸೇರಿದಂತೆ ಹಲವು ಬೆಳೆಗಳಿಗೆ ರೈತರು ಅಂತರ ಬೇಸಾಯ (ಎಡೆಕುಂಟೆ) ಮಾಡುತ್ತಿದ್ದಾರೆ. ಇನ್ನೂ ಭೂಮಿ ಸಿದ್ಧತೆ ಮಾಡಿಕೊಂಡು ಮಳೆಗಾಗಿ ಕಾಯುತ್ತಿದ್ದ ರೈತರು ರಾಗಿ ಬಿತ್ತನೆಯಲ್ಲಿ ತೊಡಗಿದ್ದಾರೆ.</p>.<p>ಎರಡು ತಿಂಗಳ ನಂತರ ಮಳೆ ಬಿದ್ದಿರುವುದರಿಂದ ಈಗಷ್ಟೇ ಬಿತ್ತನೆ ಆರಂಭವಾಗಿದೆ. ಮುಂದೆ ಇದೇ ರೀತಿ ಮಳೆಯಾದರೆ. ಇಲ್ಲಿ ಬೆಳೆ ಕಾಣಬಹುದು. ಇಲ್ಲವಾದರೆ ಜಾನುವಾರುಗಳಿಗೆ ಮೇವು ದೊರಕುವುದು ಕಷ್ಟಕರವಾಗಲಿದೆ ಎನ್ನುತ್ತಾರೆ ಈ ಭಾಗದ ರೈತರು.</p>.<p>ಮಳೆ ಕೈಕೊಟ್ಟಿದ್ದರಿಂದ ರೈತರು ಜಮೀನುಗಳಲ್ಲಿ ಉಳುಮೆ ಮಾಡಲು ಸಾಧ್ಯವಾಗಿರಲಿಲ್ಲ. ಕಳೆದ 15 ದಿನಗಳಿಂದಾದ ಮಳೆಯಿಂದಾಗಿ ಉಳಿಮೆ, ಬಿತ್ತನೆ ಬೀಜ, ಗೊಬ್ಬರ ಟ್ರ್ಯಾಕ್ಟರ್ ಮತ್ತು ಕೂಲಿಯಾಳುಗಳಿಗೆ ಬೇಡಿಕೆ ಹೆಚ್ಚಾಗಿದೆ.</p>.<p>ತಾಲ್ಲೂಕಿನ ಕೆಲವೆಡೆ ರಾಗಿ ಬಿತ್ತನೆ ಕಾರ್ಯ ನಡೆಯುತ್ತಿದೆ. ಬಿತ್ತನೆಯಾಗಿರುವ ಬೆಳೆಗಳಿಗೆ ಅಂತರ ಬೇಸಾಯ ಮೇಲುಗೊಬ್ಬರ, ಕಳೆ ತೆಗೆಯುವ ಕಾರ್ಯ ನಡೆಯುತ್ತಿದೆ. ಮುನ್ನ ಮುಂಗಾರಿನಲ್ಲಿ ಬಿತ್ತನೆಯಾಗಿದ್ದ ಸಾವೆ ಕಟಾವು ನಡೆಯುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಸಿ ಎಸ್ ಈಶ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>