<p><strong>ಚಿತ್ರದುರ್ಗ: </strong>ಆಕಸ್ಮಿಕವಾಗಿ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡುವ 'ಅನುಗ್ರಹ' ಯೋಜನೆಯನ್ನು ಮುಂದುವರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ತಿಳಿಸಿದರು.</p>.<p>ಚಿತ್ರದುರ್ಗದಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಶುಪಾಲನೆ ಇಲಾಖೆಯ ವರದಿ ಪಡೆಯುವ ವೇಳೆ ಮಾತನಾಡಿದ ಅವರು, 'ಅನುಗ್ರಹ ಯೋಜನೆ ಮುಂದುವರಿಸಲು ಇಂದು ಬೆಳಿಗ್ಗೆ ಆದೇಶ ಹೊರಡಿಸಲಾಗಿದೆ' ಎಂದರು.</p>.<p>ಆಕಸ್ಮಿಕವಾಗಿ ಮೃತಪಟ ಕುರಿಗಳಿಗೆ ₹ 5 ಸಾವಿರ, ದನಗಳಿಗೆ ₹ 10 ಸಾವಿರ ಹಾಗೂ ಕುರಿ ಮರಿಗಳಿಗೆ ₹ 2,500 ನೀಡಲು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಪಶುಸಂಗೋಪನೆ ಇಲಾಖೆಯ ಅನುಗ್ರಹ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸಿತ್ತು. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದರು.</p>.<p>ಶಿವಮೊಗ್ಗ ಜಿಲ್ಲೆಯ ಸಾಗರ ಬಳಿ ಮೃತಪಟ್ಟ 35 ಕುರಿಗಳ ಪೋಟೊ ಟ್ವೀಟ್ ಮಾಡಿದ ಸಿದ್ದರಾಮಯ್ಯ, 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಾಟಕ ನಿಲ್ಲಿಸಿ ಕುರಿಗಾಯಿಗಳ ಬಗ್ಗೆ ಕಾಳಜಿ ಇದ್ದರೆ ಅನುಗ್ರಹ ಯೋಜನೆಗೆ ಹಣ ಒದಗಿಸಿ' ಎಂದು ಆಗ್ರಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಆಕಸ್ಮಿಕವಾಗಿ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡುವ 'ಅನುಗ್ರಹ' ಯೋಜನೆಯನ್ನು ಮುಂದುವರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ತಿಳಿಸಿದರು.</p>.<p>ಚಿತ್ರದುರ್ಗದಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಶುಪಾಲನೆ ಇಲಾಖೆಯ ವರದಿ ಪಡೆಯುವ ವೇಳೆ ಮಾತನಾಡಿದ ಅವರು, 'ಅನುಗ್ರಹ ಯೋಜನೆ ಮುಂದುವರಿಸಲು ಇಂದು ಬೆಳಿಗ್ಗೆ ಆದೇಶ ಹೊರಡಿಸಲಾಗಿದೆ' ಎಂದರು.</p>.<p>ಆಕಸ್ಮಿಕವಾಗಿ ಮೃತಪಟ ಕುರಿಗಳಿಗೆ ₹ 5 ಸಾವಿರ, ದನಗಳಿಗೆ ₹ 10 ಸಾವಿರ ಹಾಗೂ ಕುರಿ ಮರಿಗಳಿಗೆ ₹ 2,500 ನೀಡಲು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಪಶುಸಂಗೋಪನೆ ಇಲಾಖೆಯ ಅನುಗ್ರಹ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸಿತ್ತು. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದರು.</p>.<p>ಶಿವಮೊಗ್ಗ ಜಿಲ್ಲೆಯ ಸಾಗರ ಬಳಿ ಮೃತಪಟ್ಟ 35 ಕುರಿಗಳ ಪೋಟೊ ಟ್ವೀಟ್ ಮಾಡಿದ ಸಿದ್ದರಾಮಯ್ಯ, 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಾಟಕ ನಿಲ್ಲಿಸಿ ಕುರಿಗಾಯಿಗಳ ಬಗ್ಗೆ ಕಾಳಜಿ ಇದ್ದರೆ ಅನುಗ್ರಹ ಯೋಜನೆಗೆ ಹಣ ಒದಗಿಸಿ' ಎಂದು ಆಗ್ರಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>