<p><strong>ಮೊಳಕಾಲ್ಮುರು:</strong> ‘ಸರ್ಕಾರವು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಪಾಲಕರು ಮತ್ತು ಶಿಕ್ಷಕರು ಕೈ ಜೋಡಿಸುವ ಮೂಲಕ ಉದ್ದೇಶ ಸಾಕಾರಕ್ಕೆ ಸಹಕಾರ ನೀಡಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ರವಿಶಂಕರ್ ಹೇಳಿದರು.</p>.<p>ತಾಲ್ಲೂಕಿನ ರಾಂಪುರದ ಗಡ್ಡೆ ವೀರಭದ್ರಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಂಪುರ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪರಿಪೂರ್ಣ ಶಿಕ್ಷಣ ಪಡೆಯಲು ಪಠ್ಯದ ಜತೆ ಪಠ್ಯೇತರ ಚಟುವಟಿಗಳು ಮಕ್ಕಳಿಗೆ ಅಗತ್ಯ. ಇದಕ್ಕಾಗಿ ಪ್ರತಿಭಾ ಕಾರಂಜಿ, ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಬಿ. ಮಮತಾ, ಸಿಆರ್ಪಿ ಎ.ಎಲ್. ಮೌನೇಶ್ ಮಾತನಾಡಿದರು. ಮುಖ್ಯಶಿಕ್ಷಕ ಹನುಮಂತರಾಯ, ಶಿಕ್ಷಕ ಎಚ್.ಎಂ. ಸತೀಶ್, ಪಿಡಿಒ ಗುಂಡಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ‘ಸರ್ಕಾರವು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಪಾಲಕರು ಮತ್ತು ಶಿಕ್ಷಕರು ಕೈ ಜೋಡಿಸುವ ಮೂಲಕ ಉದ್ದೇಶ ಸಾಕಾರಕ್ಕೆ ಸಹಕಾರ ನೀಡಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ರವಿಶಂಕರ್ ಹೇಳಿದರು.</p>.<p>ತಾಲ್ಲೂಕಿನ ರಾಂಪುರದ ಗಡ್ಡೆ ವೀರಭದ್ರಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಂಪುರ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪರಿಪೂರ್ಣ ಶಿಕ್ಷಣ ಪಡೆಯಲು ಪಠ್ಯದ ಜತೆ ಪಠ್ಯೇತರ ಚಟುವಟಿಗಳು ಮಕ್ಕಳಿಗೆ ಅಗತ್ಯ. ಇದಕ್ಕಾಗಿ ಪ್ರತಿಭಾ ಕಾರಂಜಿ, ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಬಿ. ಮಮತಾ, ಸಿಆರ್ಪಿ ಎ.ಎಲ್. ಮೌನೇಶ್ ಮಾತನಾಡಿದರು. ಮುಖ್ಯಶಿಕ್ಷಕ ಹನುಮಂತರಾಯ, ಶಿಕ್ಷಕ ಎಚ್.ಎಂ. ಸತೀಶ್, ಪಿಡಿಒ ಗುಂಡಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>