<p><strong>ನಾಯಕನಹಟ್ಟಿ</strong>: ಭದ್ರಾಮೇಲ್ದಂಡೆ ಯೋಜನೆ ರಾಜ್ಯ ಸರ್ಕಾರದ ನೀರಾವರಿ ಇಲಾಖೆಯ ಯೋಜನೆಯೇ ಹೊರತು ಕೇಂದ್ರ ಸರ್ಕಾರದ ಯೋಜನೆಯಲ್ಲ. ಹಾಗಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.</p>.<p>ನಾಯಕನಹಟ್ಟಿ ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭದ್ರಾಮೇಲ್ದಂಡೆ ಯೋಜನೆಗೆ ಮೊದಲು ಅನುದಾನ ಬಿಡುಗಡೆ ಮಾಡಿದ್ದೇ ಬಿಜೆಪಿ ಸರ್ಕಾರ. ಯುಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ₹ 5,700ಕೋಟಿ, ಮತ್ತೊಮ್ಮೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾದಾಗ ಪುನಃ ಅನುದಾನ ಬಿಡುಗಡೆ ಮಾದ್ದರು. ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಒಟ್ಟು ₹ 8 ಸಾವಿರ ಕೋಟಿ ಅನುದಾನಬಿಡುಗಡೆ ಮಾಡಿದೆ. ಆದರೆ, ಇಲ್ಲಿಯವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಭದ್ರಾಮೇಲ್ದಂಡೆ ಯೋಜನೆಗೆ ಎಷ್ಟು ಹಣ ಬಿಡಗಡೆ ಮಾಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಲಿ ಎಂದರು.</p>.<p>ಯೋಜನೆಯ ಹೆಸರು ಹೇಳಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ನೀರಾವರಿ ಯೋಜನೆ ಜಾರಿಯಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ಕಾರ ನಡೆಸುವವರಿಗೆ ಕನಿಷ್ಠ ಜ್ಞಾನವಿರಬೇಕು. ಅನುದಾನದ ಕೊರತೆಯ ನೆಪಹೊಡ್ಡಿ ಯೋಜನೆಯನ್ನು ನಿಲ್ಲಿಸಬಾರದು ಎಂದು ಆಕ್ರೋಶ ಹೊರಹಾಕಿದರು.</p>.<p>ಕೇಂದ್ರ ಸರ್ಕಾರ ಎರಡು ವರ್ಷದ ಹಿಂದಿನ ಬಜೆಟ್ನಲ್ಲಿ ₹ 5,300 ಕೋಟಿ ಅನುದಾನವನ್ನು ಘೋಷಿಸಿತ್ತು. ಜೊತೆಗೆ ಅನುದಾನ ಬಿಡುಗಡೆಗೆ ಪರಿಷ್ಕೃತ ಅಂದಾಜುಪಟ್ಟಿ, ಮೊದಲ ಅಂದಾಜುಪಟ್ಟಿ ಎಷ್ಟಿತ್ತು?, ಹಿಂದೆ ಖರ್ಚಾದ ಹಣವೆಷ್ಟು?, ಯಾವುದಕ್ಕೆ ವ್ಯಯಿಸಲಾಗಿದೆ, ಮುಂದೆ ಎಷ್ಟು ಹಣದ ಅವಶ್ಯಕತೆ ಇದೆ ಎಂಬ ದಾಖಲೆಗಳನ್ನು ಕೇಂದ್ರ ಜಲಶಕ್ತಿ ಸಚಿವಾಲಯ ಕೇಳಿತ್ತು. ಆದರೆ, ಆ ದಾಖಲೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಎರಡೂವರೆ ವರ್ಷದಿಂದ ಒದ್ದಾಡುತ್ತಿದೆ. ಹಾಗಾಗಿ ಯೋಜನೆಗೆ ಅನುದಾನದ ಕೊರತೆಯಾಗಿದೆ. ಇದೆಲ್ಲಕೂ ನೇರಹೊಣೆ ರಾಜ್ಯಸರ್ಕಾರ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ</strong>: ಭದ್ರಾಮೇಲ್ದಂಡೆ ಯೋಜನೆ ರಾಜ್ಯ ಸರ್ಕಾರದ ನೀರಾವರಿ ಇಲಾಖೆಯ ಯೋಜನೆಯೇ ಹೊರತು ಕೇಂದ್ರ ಸರ್ಕಾರದ ಯೋಜನೆಯಲ್ಲ. ಹಾಗಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.</p>.<p>ನಾಯಕನಹಟ್ಟಿ ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭದ್ರಾಮೇಲ್ದಂಡೆ ಯೋಜನೆಗೆ ಮೊದಲು ಅನುದಾನ ಬಿಡುಗಡೆ ಮಾಡಿದ್ದೇ ಬಿಜೆಪಿ ಸರ್ಕಾರ. ಯುಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ₹ 5,700ಕೋಟಿ, ಮತ್ತೊಮ್ಮೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾದಾಗ ಪುನಃ ಅನುದಾನ ಬಿಡುಗಡೆ ಮಾದ್ದರು. ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಒಟ್ಟು ₹ 8 ಸಾವಿರ ಕೋಟಿ ಅನುದಾನಬಿಡುಗಡೆ ಮಾಡಿದೆ. ಆದರೆ, ಇಲ್ಲಿಯವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಭದ್ರಾಮೇಲ್ದಂಡೆ ಯೋಜನೆಗೆ ಎಷ್ಟು ಹಣ ಬಿಡಗಡೆ ಮಾಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಲಿ ಎಂದರು.</p>.<p>ಯೋಜನೆಯ ಹೆಸರು ಹೇಳಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ನೀರಾವರಿ ಯೋಜನೆ ಜಾರಿಯಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ಕಾರ ನಡೆಸುವವರಿಗೆ ಕನಿಷ್ಠ ಜ್ಞಾನವಿರಬೇಕು. ಅನುದಾನದ ಕೊರತೆಯ ನೆಪಹೊಡ್ಡಿ ಯೋಜನೆಯನ್ನು ನಿಲ್ಲಿಸಬಾರದು ಎಂದು ಆಕ್ರೋಶ ಹೊರಹಾಕಿದರು.</p>.<p>ಕೇಂದ್ರ ಸರ್ಕಾರ ಎರಡು ವರ್ಷದ ಹಿಂದಿನ ಬಜೆಟ್ನಲ್ಲಿ ₹ 5,300 ಕೋಟಿ ಅನುದಾನವನ್ನು ಘೋಷಿಸಿತ್ತು. ಜೊತೆಗೆ ಅನುದಾನ ಬಿಡುಗಡೆಗೆ ಪರಿಷ್ಕೃತ ಅಂದಾಜುಪಟ್ಟಿ, ಮೊದಲ ಅಂದಾಜುಪಟ್ಟಿ ಎಷ್ಟಿತ್ತು?, ಹಿಂದೆ ಖರ್ಚಾದ ಹಣವೆಷ್ಟು?, ಯಾವುದಕ್ಕೆ ವ್ಯಯಿಸಲಾಗಿದೆ, ಮುಂದೆ ಎಷ್ಟು ಹಣದ ಅವಶ್ಯಕತೆ ಇದೆ ಎಂಬ ದಾಖಲೆಗಳನ್ನು ಕೇಂದ್ರ ಜಲಶಕ್ತಿ ಸಚಿವಾಲಯ ಕೇಳಿತ್ತು. ಆದರೆ, ಆ ದಾಖಲೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಎರಡೂವರೆ ವರ್ಷದಿಂದ ಒದ್ದಾಡುತ್ತಿದೆ. ಹಾಗಾಗಿ ಯೋಜನೆಗೆ ಅನುದಾನದ ಕೊರತೆಯಾಗಿದೆ. ಇದೆಲ್ಲಕೂ ನೇರಹೊಣೆ ರಾಜ್ಯಸರ್ಕಾರ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>