<p><strong>ಚಿತ್ರದುರ್ಗ</strong>: ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ಹೆಚ್ಚಿರುವ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಬ್ಯಾಂಕ್ಗಳು ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಹೆಚ್ಚು ಶೈಕ್ಷಣಿಕ ಸಾಲ ನೀಡಬೇಕು’ ಎಂದು ಸಂಸದ ಗೋವಿಂದ ಕಾರಜೋಳ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನೇತೃತ್ವದಲ್ಲಿ ನಡೆದ 2025-26ನೇ ಸಾಲಿನ ಡಿ.ಎಲ್.ಆರ್.ಸಿ (ಜಿಲ್ಲಾ ಹಂತದ ಪುನರ್ ಪರಿಶೀಲನಾ ಸಮಿತಿ) ಹಾಗೂ ಡಿಸಿಸಿ (ಜಿಲ್ಲಾ ಸಲಹಾ ಸಮಿತಿ) ಎರಡನೇ ತ್ರೈಮಾಸಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ 2025-26ನೇ ಸಾಲಿಗೆ ₹ 33.71 ಕೋಟಿ ಶೈಕ್ಷಣಿಕ ಸಾಲ ನೀಡುವ ಗುರಿಯನ್ನು ಬ್ಯಾಂಕ್ಗಳಿಗೆ ನೀಡಲಾಗಿದೆ. ಆದರೆ ಬ್ಯಾಂಕ್ಗಳು ಕೇವಲ ₹ 3.21 ಕೋಟಿ ಸಾಲ ವಿತರಣೆ ಮಾಡಿವೆ. ಇದೇ ಮಾದರಿಯಲ್ಲಿ ಗೃಹಸಾಲಕ್ಕೆ ನಿಗದಿ ಪಡಿಸಿದ ₹ 163.32 ಕೋಟಿ ಪೈಕಿ ಕೇವಲ ₹ 19.98 ಕೋಟಿ ಸಾಲ ವಿತರಿಸಲಾಗಿದೆ. ಬ್ಯಾಂಕ್ಗಳು ಶಿಕ್ಷಣ ಹಾಗೂ ಗೃಹ ನಿರ್ಮಾಣಕ್ಕೆ ಉತ್ತೇಜನ ನೀಡುವ ಮೂಲಕ ಜಿಲ್ಲೆಯ ಪ್ರಗತಿಗೆ ಸಹಕಾರಿಯಾಗಬೇಕು’ ಎಂದು ಸೂಚಿಸಿದರು.</p>.<p>ಜಿ.ಪಂ. ಸಿಇಒ ಡಾ.ಎಸ್. ಆಕಾಶ್ ಮಾತನಾಡಿ ‘ಬ್ಯಾಂಕ್ಗಳು ಜಿಲ್ಲೆಯ ನಾಗರಿಕರಿಂದ ಸಂಗ್ರಹಿಸಿದ ಠೇವಣಿಗೆ ಸಂವಾದಿಯಾಗಿ ಶೇ 60ರಷ್ಟು ಸಾಲವನ್ನು ಸ್ಥಳೀಯರಿಗೆ ನೀಡಬೇಕು. ಕೆಲ ಬ್ಯಾಂಕ್ಗಳು ಸಾಲ ಮಂಜೂರಾತಿ ಅನುಪಾತವನ್ನು ಪಾಲಿಸುತ್ತಿಲ್ಲ. ಬ್ಯಾಂಕ್ಗಳ ಈ ಪ್ರವೃತ್ತಿ ಬದಲಾಗಬೇಕು. ಈಗಾಗಲೇ ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಹಾಗೂ ಬ್ಯಾಂಕ್ಗಳೊಂದಿಗೆ ಸಮನ್ವಯ ಸಾಧಿಸಲು ಬ್ಯಾಂಕ್ ಸಖಿಯರನ್ನು ನೇಮಕ ಮಾಡಿಕೊಳ್ಳಲಾಗಿದೆ’ ಎಂದರು.</p>.<p>‘2025-26ನೇ ಸಾಲಿಗೆ 6,766 ಎಸ್.ಎಚ್.ಜಿಗಳಿಗೆ ಸಾಲ ಸೌಲಭ್ಯದ ಗುರಿ ನಿಗದಿ ಪಡಿಸಲಾಗಿದೆ. 1,294 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 1,115 ಎಸ್.ಎಚ್.ಜಿಗಳಿಗೆ ಈಗಾಗಲೇ ಸಾಲ ಸೌಲಭ್ಯ ನೀಡಲಾಗಿದೆ. 150 ಅರ್ಜಿಗಳು ಬಾಕಿದ್ದು, 29 ಅರ್ಜಿಗಳನ್ನು ತಿರಸ್ಕರಿಸಲಾಗಿದೆ’ ಎಂದು ಜಿ.ಪಂ. ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಸಭೆಗೆ ಮಾಹಿತಿ ನೀಡಿದರು.</p>.<p>ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಮಾತನಾಡಿ ‘ಪ್ರಧಾನಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣ ಉದ್ದಿಮೆಗಳ ಔಪಚಾರೀಕರಣ ಯೋಜನೆ ಅಡಿ ಜಿಲ್ಲೆಯಲ್ಲಿ 100 ಘಟಕಗಳಿಗೆ ಸಾಲ ಸೌಲಭ್ಯ ನೀಡಲು ಗುರಿ ನಿಗದಿ ಮಾಡಲಾಗಿದೆ. 40 ಅರ್ಜಿಗಳು ಸ್ವೀಕೃತವಾಗಿವೆ. 5 ಅರ್ಜಿಗಳಿಗೆ ಮಂಜೂರಾತಿ ನೀಡಲಾಗಿದ್ದು, 34 ಅರ್ಜಿಗಳು ಬಾಕಿಯಿವೆ. 1 ಅರ್ಜಿಯನ್ನು ತಿರಸ್ಕರಿಸಲಾಗಿದೆ. ಯೋಜನೆಗೆ ರಾಜ್ಯ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ’ ಎಂದರು.</p>.<p>‘ಬ್ಯಾಂಕ್ಗಳು ಕೃಷಿ, ಶಿಕ್ಷಣ, ವಸತಿ, ಸಣ್ಣ ಹಾಗೂ ಅತಿಸಣ್ಣ ಉದ್ದಿಮೆ ಹಾಗೂ ಇತರೆ ಸರ್ಕಾರದ ಯೋಜನೆಗಳಡಿ ಸಬ್ಸಿಡಿಯೊಂದಿಗೆ ಸಾಲ ಸೌಲಭ್ಯ ನೀಡಲು ವಿಳಂಬ ಮಾಡಬಾರದು. ಈ ಅರ್ಜಿಗಳನ್ನು ಸಿಬಿಲ್ ಸ್ಕೋರ್ ಕಾರಣ ಹೇಳಿ ತಿರಸ್ಕರಿಸಬಾರದು’ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಘವೇಂದ್ರ ಎಂ. ಹೇಳಿದರು.</p>.<p>ಕೌಶಲಾಭಿವೃದ್ಧಿ ಇಲಾಖೆ ಅಧಿಕಾರಿ ಅತೀಕ್, ಆರ್ಬಿಐ ಪ್ರಬಂಧಕ ಅರುಣ್ ಕುಮಾರ್, ಕೆನರಾ ಬ್ಯಾಂಕ್ ವಲಯ ಪ್ರಬಂಧಕಿ ಅನಿತಾ, ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ವಿನಂತ್ ಕೆ., ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್ ಪ್ರಬಂಧಕ ಜನಾರ್ಧನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ಹೆಚ್ಚಿರುವ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಬ್ಯಾಂಕ್ಗಳು ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಹೆಚ್ಚು ಶೈಕ್ಷಣಿಕ ಸಾಲ ನೀಡಬೇಕು’ ಎಂದು ಸಂಸದ ಗೋವಿಂದ ಕಾರಜೋಳ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನೇತೃತ್ವದಲ್ಲಿ ನಡೆದ 2025-26ನೇ ಸಾಲಿನ ಡಿ.ಎಲ್.ಆರ್.ಸಿ (ಜಿಲ್ಲಾ ಹಂತದ ಪುನರ್ ಪರಿಶೀಲನಾ ಸಮಿತಿ) ಹಾಗೂ ಡಿಸಿಸಿ (ಜಿಲ್ಲಾ ಸಲಹಾ ಸಮಿತಿ) ಎರಡನೇ ತ್ರೈಮಾಸಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ 2025-26ನೇ ಸಾಲಿಗೆ ₹ 33.71 ಕೋಟಿ ಶೈಕ್ಷಣಿಕ ಸಾಲ ನೀಡುವ ಗುರಿಯನ್ನು ಬ್ಯಾಂಕ್ಗಳಿಗೆ ನೀಡಲಾಗಿದೆ. ಆದರೆ ಬ್ಯಾಂಕ್ಗಳು ಕೇವಲ ₹ 3.21 ಕೋಟಿ ಸಾಲ ವಿತರಣೆ ಮಾಡಿವೆ. ಇದೇ ಮಾದರಿಯಲ್ಲಿ ಗೃಹಸಾಲಕ್ಕೆ ನಿಗದಿ ಪಡಿಸಿದ ₹ 163.32 ಕೋಟಿ ಪೈಕಿ ಕೇವಲ ₹ 19.98 ಕೋಟಿ ಸಾಲ ವಿತರಿಸಲಾಗಿದೆ. ಬ್ಯಾಂಕ್ಗಳು ಶಿಕ್ಷಣ ಹಾಗೂ ಗೃಹ ನಿರ್ಮಾಣಕ್ಕೆ ಉತ್ತೇಜನ ನೀಡುವ ಮೂಲಕ ಜಿಲ್ಲೆಯ ಪ್ರಗತಿಗೆ ಸಹಕಾರಿಯಾಗಬೇಕು’ ಎಂದು ಸೂಚಿಸಿದರು.</p>.<p>ಜಿ.ಪಂ. ಸಿಇಒ ಡಾ.ಎಸ್. ಆಕಾಶ್ ಮಾತನಾಡಿ ‘ಬ್ಯಾಂಕ್ಗಳು ಜಿಲ್ಲೆಯ ನಾಗರಿಕರಿಂದ ಸಂಗ್ರಹಿಸಿದ ಠೇವಣಿಗೆ ಸಂವಾದಿಯಾಗಿ ಶೇ 60ರಷ್ಟು ಸಾಲವನ್ನು ಸ್ಥಳೀಯರಿಗೆ ನೀಡಬೇಕು. ಕೆಲ ಬ್ಯಾಂಕ್ಗಳು ಸಾಲ ಮಂಜೂರಾತಿ ಅನುಪಾತವನ್ನು ಪಾಲಿಸುತ್ತಿಲ್ಲ. ಬ್ಯಾಂಕ್ಗಳ ಈ ಪ್ರವೃತ್ತಿ ಬದಲಾಗಬೇಕು. ಈಗಾಗಲೇ ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಹಾಗೂ ಬ್ಯಾಂಕ್ಗಳೊಂದಿಗೆ ಸಮನ್ವಯ ಸಾಧಿಸಲು ಬ್ಯಾಂಕ್ ಸಖಿಯರನ್ನು ನೇಮಕ ಮಾಡಿಕೊಳ್ಳಲಾಗಿದೆ’ ಎಂದರು.</p>.<p>‘2025-26ನೇ ಸಾಲಿಗೆ 6,766 ಎಸ್.ಎಚ್.ಜಿಗಳಿಗೆ ಸಾಲ ಸೌಲಭ್ಯದ ಗುರಿ ನಿಗದಿ ಪಡಿಸಲಾಗಿದೆ. 1,294 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 1,115 ಎಸ್.ಎಚ್.ಜಿಗಳಿಗೆ ಈಗಾಗಲೇ ಸಾಲ ಸೌಲಭ್ಯ ನೀಡಲಾಗಿದೆ. 150 ಅರ್ಜಿಗಳು ಬಾಕಿದ್ದು, 29 ಅರ್ಜಿಗಳನ್ನು ತಿರಸ್ಕರಿಸಲಾಗಿದೆ’ ಎಂದು ಜಿ.ಪಂ. ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಸಭೆಗೆ ಮಾಹಿತಿ ನೀಡಿದರು.</p>.<p>ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಮಾತನಾಡಿ ‘ಪ್ರಧಾನಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣ ಉದ್ದಿಮೆಗಳ ಔಪಚಾರೀಕರಣ ಯೋಜನೆ ಅಡಿ ಜಿಲ್ಲೆಯಲ್ಲಿ 100 ಘಟಕಗಳಿಗೆ ಸಾಲ ಸೌಲಭ್ಯ ನೀಡಲು ಗುರಿ ನಿಗದಿ ಮಾಡಲಾಗಿದೆ. 40 ಅರ್ಜಿಗಳು ಸ್ವೀಕೃತವಾಗಿವೆ. 5 ಅರ್ಜಿಗಳಿಗೆ ಮಂಜೂರಾತಿ ನೀಡಲಾಗಿದ್ದು, 34 ಅರ್ಜಿಗಳು ಬಾಕಿಯಿವೆ. 1 ಅರ್ಜಿಯನ್ನು ತಿರಸ್ಕರಿಸಲಾಗಿದೆ. ಯೋಜನೆಗೆ ರಾಜ್ಯ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ’ ಎಂದರು.</p>.<p>‘ಬ್ಯಾಂಕ್ಗಳು ಕೃಷಿ, ಶಿಕ್ಷಣ, ವಸತಿ, ಸಣ್ಣ ಹಾಗೂ ಅತಿಸಣ್ಣ ಉದ್ದಿಮೆ ಹಾಗೂ ಇತರೆ ಸರ್ಕಾರದ ಯೋಜನೆಗಳಡಿ ಸಬ್ಸಿಡಿಯೊಂದಿಗೆ ಸಾಲ ಸೌಲಭ್ಯ ನೀಡಲು ವಿಳಂಬ ಮಾಡಬಾರದು. ಈ ಅರ್ಜಿಗಳನ್ನು ಸಿಬಿಲ್ ಸ್ಕೋರ್ ಕಾರಣ ಹೇಳಿ ತಿರಸ್ಕರಿಸಬಾರದು’ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಘವೇಂದ್ರ ಎಂ. ಹೇಳಿದರು.</p>.<p>ಕೌಶಲಾಭಿವೃದ್ಧಿ ಇಲಾಖೆ ಅಧಿಕಾರಿ ಅತೀಕ್, ಆರ್ಬಿಐ ಪ್ರಬಂಧಕ ಅರುಣ್ ಕುಮಾರ್, ಕೆನರಾ ಬ್ಯಾಂಕ್ ವಲಯ ಪ್ರಬಂಧಕಿ ಅನಿತಾ, ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ವಿನಂತ್ ಕೆ., ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್ ಪ್ರಬಂಧಕ ಜನಾರ್ಧನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>