<p><strong>ಸಿರಿಗೆರೆ:</strong> ‘ತಲೆ ತಲಾಂತರದಿಂದ ಬರದ ನಾಡಿನ ಹಣೆಪಟ್ಟಿ ಹೊತ್ತಿರುವ ಜಿಲ್ಲೆಯನ್ನು ಸಮೃದ್ಧಗೊಳಿಸುವ ಕಡೆಗೆ ನಮ್ಮ ಪಯಣ ಆರಂಭವಾಗಿದೆ. ಇದರಲ್ಲಿ ಜನಪ್ರತಿನಿಧಿಗಳಿಗಿರುವ ಹೊಣೆಗಾರಿಯಂತೆ ಸಾರ್ವಜನಿಕರ ಜವಾಬ್ದಾರಿಯೂ ಇದೆ’ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.</p>.<p>ಸಮೀಪದ ಲಕ್ಷ್ಮಿಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಾಪುರ ಹಾಗೂ ಐಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ. ಬಳ್ಳೆಕಟ್ಟೆ ಗ್ರಾಮಗಳಲ್ಲಿ ಸೋಮವಾರ ನಡೆದ ‘ಜಲ ಅರ್ಪಣ’ ದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ಗ್ರಾಮೀಣ ಭಾಗದಲ್ಲಿ ತಾಯಂದಿರು ಮತ್ತು ಸೋದರಿಯರು ಮೈಲಿಗಟ್ಟಲೆ ಹೋಗಿ ದೂರದ ಬಾವಿಗಳಿಂದ, ಹಳ್ಳಗಳಿಂದ, ನದಿಗಳಿಂದ ನೀರು ಹೊತ್ತು ತರಬೇಕಾದ ಪರಿಸ್ಥಿತಿ ಇತ್ತು. ಆ ಕಷ್ಟ ನೀಗಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಜಲಜೀವನ್ ಮಿಷನ್ ಯೋಜನೆ ಜಾರಿಗೆ ತಂದರು. ದಿನದ 24 ಗಂಟೆಯೂ ಮನೆಗಳಿಗೆ ನೀರು ಕೊಡುವ ವ್ಯವಸ್ಥಿತ ಯೋಜನೆ ಇದಾಗಿದೆ’ ಎಂದರು.</p>.<p>‘ಜನರು ನೀರಿನ ಬಗ್ಗೆ ಅತ್ಯಂತ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ನೀರು ಅಮೂಲ್ಯವಾದದು. ಅದನ್ನು ಹೊಣೆಗಾರಿಕೆಯಿಂದ ಬಳಸಿ, ಮುಂದಿನ ಪೀಳಿಗೆಗೆ ಉಳಿಸಬೇಕು. ರೈತ ಸಮುದಾಯ ನೀರನ್ನು ಭೂಮಿಯಲ್ಲಿ ಇಂಗಿಸುವ ಕೆಲಸಕ್ಕೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ದಶಕಗಳ ಸವಾಲಾಗಿತ್ತು. ಇಂದು ಚಿತ್ರದುರ್ಗ ಜಿಲ್ಲೆಯ ಸಾವಿರಾರು ಮನೆಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ನಲ್ಲಿ ಮೂಲಕ ಕುಡಿಯುವ ನೀರು ಸಂಪರ್ಕ ಒದಗಿಸಲಾಗಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಅಂದಾಜು ₹ 940 ಕೋಟಿ ಅನುದಾನದಲ್ಲಿ 1,559 ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅದರಲ್ಲಿ ಈಗಾಗಲೇ ₹ 504 ಕೋಟಿಯಷ್ಟು ಅನುದಾನವನ್ನು ಖರ್ಚು ಮಾಡಿ 1,083 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ’ ಎಂದು ಹೇಳದರು.</p>.<p>ಚಿತ್ರದುರ್ಗ ತಾಲ್ಲೂಕಿನ ಗ್ರಾಮಾಂತರ ಭಾಗಕ್ಕೆ 271 ಕಾಮಗಾರಿಗಳಿಗೆ ₹ 189.00 ಕೋಟಿ ಅನುದಾನ ಬಳಸಲಾಗಿದೆ. ಸರ್ಕಾರ ಯೋಜನೆಗಳನ್ನು ಜಾರಿಗೆ ತರುತ್ತದೆ. ಅದನ್ನು ಉಳಿಸುವ ಹೊಣೆಗಾರಿಕೆ ಗ್ರಾಮಸ್ಥರಾದ ನಿಮ್ಮ ಕೈಯ್ಯಲಿದೆ, ನೀರನ್ನು ಅಮೂಲ್ಯವಾಗಿ ಮತ್ತು ಮಿತವಾಗಿ ಬಳಸಿ, ವ್ಯರ್ಥ ಮಾಡಬೇಡಿ, ಗ್ರಾಮ ಪಂಚಾಯತಿಗಳು ಮತ್ತು ಸ್ವ-ಸಹಾಯ ಸಂಘಗಳು ಈ ಯೋಜನೆಗಳ ಸುಸ್ಥಿರತೆಯನ್ನು ನೋಡಿಕೊಳ್ಳಬೇಕು, ಅಂತರ್ಜಲ ಹೆಚ್ಚಿಸಲು ಮಳೆ ನೀರು ಕೊಯ್ದು ಮತ್ತು ಕೆರೆಗಳ ಪುನ ತನಕ್ಕೂ ನಾವು ಒತ್ತು ನೀಡಬೇಕಿದೆ ಎಂದರು.</p>.<p>ಕಾರ್ಯಕ್ರಮಕ್ಕೂ ಮುಂಚೆ ಸಂಸದರನ್ನು ಗ್ರಾಮದ ಮಹಿಳೆಯರು ಪೂರ್ಣಕುಂಭದೊಂದಿಗೆ ಗ್ರಾಮಕ್ಕೆ ಬರಮಾಡಿಕೊಂಡರು, ಸಾಂಕೇತಿಕವಾಗಿ ನಲ್ಲಿ ತಿರುಗಿಸುವ ಮೂಲಕ ಜಲ ಅರ್ಪಣಾ ದಿವಸ್ ಕಾರ್ಯಕ್ರಮಕ್ಕೆ ಸಂಸದರು ಚಾಲನೆ ನೀಡಿದರು.</p>.<p>ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಅಮರನಾಥ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಮಾಧುರಿ ಗಿರೀಶ್, ಮುಖಂಡ ಹನುಮಂತೇಗೌಡ್ರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ:</strong> ‘ತಲೆ ತಲಾಂತರದಿಂದ ಬರದ ನಾಡಿನ ಹಣೆಪಟ್ಟಿ ಹೊತ್ತಿರುವ ಜಿಲ್ಲೆಯನ್ನು ಸಮೃದ್ಧಗೊಳಿಸುವ ಕಡೆಗೆ ನಮ್ಮ ಪಯಣ ಆರಂಭವಾಗಿದೆ. ಇದರಲ್ಲಿ ಜನಪ್ರತಿನಿಧಿಗಳಿಗಿರುವ ಹೊಣೆಗಾರಿಯಂತೆ ಸಾರ್ವಜನಿಕರ ಜವಾಬ್ದಾರಿಯೂ ಇದೆ’ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.</p>.<p>ಸಮೀಪದ ಲಕ್ಷ್ಮಿಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಾಪುರ ಹಾಗೂ ಐಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ. ಬಳ್ಳೆಕಟ್ಟೆ ಗ್ರಾಮಗಳಲ್ಲಿ ಸೋಮವಾರ ನಡೆದ ‘ಜಲ ಅರ್ಪಣ’ ದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ಗ್ರಾಮೀಣ ಭಾಗದಲ್ಲಿ ತಾಯಂದಿರು ಮತ್ತು ಸೋದರಿಯರು ಮೈಲಿಗಟ್ಟಲೆ ಹೋಗಿ ದೂರದ ಬಾವಿಗಳಿಂದ, ಹಳ್ಳಗಳಿಂದ, ನದಿಗಳಿಂದ ನೀರು ಹೊತ್ತು ತರಬೇಕಾದ ಪರಿಸ್ಥಿತಿ ಇತ್ತು. ಆ ಕಷ್ಟ ನೀಗಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಜಲಜೀವನ್ ಮಿಷನ್ ಯೋಜನೆ ಜಾರಿಗೆ ತಂದರು. ದಿನದ 24 ಗಂಟೆಯೂ ಮನೆಗಳಿಗೆ ನೀರು ಕೊಡುವ ವ್ಯವಸ್ಥಿತ ಯೋಜನೆ ಇದಾಗಿದೆ’ ಎಂದರು.</p>.<p>‘ಜನರು ನೀರಿನ ಬಗ್ಗೆ ಅತ್ಯಂತ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ನೀರು ಅಮೂಲ್ಯವಾದದು. ಅದನ್ನು ಹೊಣೆಗಾರಿಕೆಯಿಂದ ಬಳಸಿ, ಮುಂದಿನ ಪೀಳಿಗೆಗೆ ಉಳಿಸಬೇಕು. ರೈತ ಸಮುದಾಯ ನೀರನ್ನು ಭೂಮಿಯಲ್ಲಿ ಇಂಗಿಸುವ ಕೆಲಸಕ್ಕೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ದಶಕಗಳ ಸವಾಲಾಗಿತ್ತು. ಇಂದು ಚಿತ್ರದುರ್ಗ ಜಿಲ್ಲೆಯ ಸಾವಿರಾರು ಮನೆಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ನಲ್ಲಿ ಮೂಲಕ ಕುಡಿಯುವ ನೀರು ಸಂಪರ್ಕ ಒದಗಿಸಲಾಗಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಅಂದಾಜು ₹ 940 ಕೋಟಿ ಅನುದಾನದಲ್ಲಿ 1,559 ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅದರಲ್ಲಿ ಈಗಾಗಲೇ ₹ 504 ಕೋಟಿಯಷ್ಟು ಅನುದಾನವನ್ನು ಖರ್ಚು ಮಾಡಿ 1,083 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ’ ಎಂದು ಹೇಳದರು.</p>.<p>ಚಿತ್ರದುರ್ಗ ತಾಲ್ಲೂಕಿನ ಗ್ರಾಮಾಂತರ ಭಾಗಕ್ಕೆ 271 ಕಾಮಗಾರಿಗಳಿಗೆ ₹ 189.00 ಕೋಟಿ ಅನುದಾನ ಬಳಸಲಾಗಿದೆ. ಸರ್ಕಾರ ಯೋಜನೆಗಳನ್ನು ಜಾರಿಗೆ ತರುತ್ತದೆ. ಅದನ್ನು ಉಳಿಸುವ ಹೊಣೆಗಾರಿಕೆ ಗ್ರಾಮಸ್ಥರಾದ ನಿಮ್ಮ ಕೈಯ್ಯಲಿದೆ, ನೀರನ್ನು ಅಮೂಲ್ಯವಾಗಿ ಮತ್ತು ಮಿತವಾಗಿ ಬಳಸಿ, ವ್ಯರ್ಥ ಮಾಡಬೇಡಿ, ಗ್ರಾಮ ಪಂಚಾಯತಿಗಳು ಮತ್ತು ಸ್ವ-ಸಹಾಯ ಸಂಘಗಳು ಈ ಯೋಜನೆಗಳ ಸುಸ್ಥಿರತೆಯನ್ನು ನೋಡಿಕೊಳ್ಳಬೇಕು, ಅಂತರ್ಜಲ ಹೆಚ್ಚಿಸಲು ಮಳೆ ನೀರು ಕೊಯ್ದು ಮತ್ತು ಕೆರೆಗಳ ಪುನ ತನಕ್ಕೂ ನಾವು ಒತ್ತು ನೀಡಬೇಕಿದೆ ಎಂದರು.</p>.<p>ಕಾರ್ಯಕ್ರಮಕ್ಕೂ ಮುಂಚೆ ಸಂಸದರನ್ನು ಗ್ರಾಮದ ಮಹಿಳೆಯರು ಪೂರ್ಣಕುಂಭದೊಂದಿಗೆ ಗ್ರಾಮಕ್ಕೆ ಬರಮಾಡಿಕೊಂಡರು, ಸಾಂಕೇತಿಕವಾಗಿ ನಲ್ಲಿ ತಿರುಗಿಸುವ ಮೂಲಕ ಜಲ ಅರ್ಪಣಾ ದಿವಸ್ ಕಾರ್ಯಕ್ರಮಕ್ಕೆ ಸಂಸದರು ಚಾಲನೆ ನೀಡಿದರು.</p>.<p>ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಅಮರನಾಥ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಮಾಧುರಿ ಗಿರೀಶ್, ಮುಖಂಡ ಹನುಮಂತೇಗೌಡ್ರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>