<p><strong>ಸಿರಿಗೆರೆ:</strong> ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇತ್ತೀಚೆಗೆ ನೀಡಿರುವ ಜಿಎಸ್ಟಿ ರಿಯಾಯಿತಿಯಿಂದ ದೇಶದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿದೆ’ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.</p>.<p>ಭರಮಸಾಗರ ಹೋಬಳಿ ಕೊಳಹಾಳ್ ಗ್ರಾಮದಲ್ಲಿ ₹ 1.25 ಕೋಟಿ ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ನೂತನ ಗ್ರಾಮ ಸೌಧ ಕಟ್ಟಡ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಲೋಕಸಭೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಇದ್ದಾರೆ. ಮುಂಬರುವ ದಿನದಲ್ಲಿ ಅವರ ಸಂಖ್ಯೆ 100 ದಾಟಬೇಕು ಎಂಬುದು ಪ್ರಧಾನಿಯವರ ಆಶಯವಾಗಿದೆ. ಗ್ರಾಮಗಳಲ್ಲಿರುವ ಜನರು ಕೇಂದ್ರ ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಶಾಸಕ ಎಂ. ಚಂದ್ರಪ್ಪ ಮಾತನಾಡಿ, ‘ಮಳೆಯ ನೀರನ್ನು ವ್ಯರ್ಥವಾಗಿ ಹರಿದು ಹೋಗದಂತೆ ತಡೆಗಟ್ಟಿ ಶೇಖರಿಸಿ ಕೃಷಿಗೆ ಬಳಸುವುದು ನಮ್ಮ ರೈತರ ಕೆಲಸ. ಅದನ್ನು ತಪ್ಪದೆ ಮಾಡಬೇಕು. ಈ ದೃಷ್ಟಿಯಿಂದ ಕ್ಷೇತ್ರದ ಹಲವು ಕಡೆಗಳಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಿಸಿದ್ದೇವೆ’ ಎಂದರು.</p>.<p>‘ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ವಿಶೇಷ ಕಾಳಜಿ ವಹಿಸಿ ₹ 25 ಲಕ್ಷ ನೀಡಿದ್ದಾರೆ. ಕಲ್ಲೇಶ್ವರ, ಚೌಡೇಶ್ವರಿ ದೇವಸ್ಥಾನಗಳಿಗೂ ಹಣ ಕೊಟ್ಟಿದ್ದೇನೆ. ಎಲ್ಲಾ ಕಡೆ ಸಿಮೆಂಟ್ ರಸ್ತೆಗಳಾಗಿದೆ. ಭರಮಸಾಗರ ಕೆರೆಗೆ ಸೂಳೆಕೆರೆಯಿಂದ ನೀರು ಬರುತ್ತಿತ್ತು. ಅದಕ್ಕಾಗಿ ಓವರ್ ಟ್ಯಾಂಕ್ ಕೂಡ ನಿರ್ಮಾಣವಾಗಿದೆ. ₹ 5 ಕೋಟಿ ವೆಚ್ಚದಲ್ಲಿ ದೊಡ್ಡ ಡ್ಯಾಂ ಕಟ್ಟಿಸಿದ ಪರಿಣಾಮವಾಗಿ ಕೊಳಾಳ್, ಕೊಳಾಳ್ ಗೊಲ್ಲರಹಟ್ಟಿ, ಅರಬಘಟ್ಟ, ಕರಿಯಮ್ಮನಹಳ್ಳಿ, ಹಳೆ ರಂಗಾಪುರ ಸೇರಿದಂತೆ 8-9 ಹಳ್ಳಿಗಳಲ್ಲಿ ಐವತ್ತು ಅಡಿಯಲ್ಲಿ ನೀರು ಸಿಗುತ್ತಿದೆ ಎಂದು ಆ ಭಾಗದ ರೈತರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ತುಂಗಭದ್ರಾ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಯಲ್ಲಿದೆ. ಅಜ್ಜಪ್ಪನಹಳ್ಳಿ ಬಳಿ ₹ 250 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದೆ. ಇದರಿಂದ ಇನ್ನು ಐವತ್ತು ವರ್ಷಗಳ ಕಾಲ ರೈತರಿಗೆ ವಿದ್ಯುತ್ ಸಮಸ್ಯೆಯಾಗುವುದಿಲ್ಲ. ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ನನ್ನ ಅನುದಾನದಿಂದಲೂ ₹ 10 ಲಕ್ಷ ನೀಡುತ್ತೇನೆ’ ಎಂದು ಚಂದ್ರಪ್ಪ ಭರವಸೆ ನೀಡಿದರು.</p>.<p>ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಚಿತ್ರದುರ್ಗ ತಾ.ಪಂ. ಇಒ ರವಿಕುಮಾರ್, ಗ್ರಾ.ಪಂ. ಅಧ್ಯಕ್ಷೆ ರೇಣುಕಮ್ಮ, ಉಪಾಧ್ಯಕ್ಷೆ ದೀಪಾ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಬಿಜೆಪಿ ಭರಮಸಾಗರ ಮಂಡಲ ಅಧ್ಯಕ್ಷ ಎನ್.ಟಿ. ಬಸವರಾಜ್, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪ್ರಮುಖರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ:</strong> ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇತ್ತೀಚೆಗೆ ನೀಡಿರುವ ಜಿಎಸ್ಟಿ ರಿಯಾಯಿತಿಯಿಂದ ದೇಶದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿದೆ’ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.</p>.<p>ಭರಮಸಾಗರ ಹೋಬಳಿ ಕೊಳಹಾಳ್ ಗ್ರಾಮದಲ್ಲಿ ₹ 1.25 ಕೋಟಿ ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ನೂತನ ಗ್ರಾಮ ಸೌಧ ಕಟ್ಟಡ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಲೋಕಸಭೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಇದ್ದಾರೆ. ಮುಂಬರುವ ದಿನದಲ್ಲಿ ಅವರ ಸಂಖ್ಯೆ 100 ದಾಟಬೇಕು ಎಂಬುದು ಪ್ರಧಾನಿಯವರ ಆಶಯವಾಗಿದೆ. ಗ್ರಾಮಗಳಲ್ಲಿರುವ ಜನರು ಕೇಂದ್ರ ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಶಾಸಕ ಎಂ. ಚಂದ್ರಪ್ಪ ಮಾತನಾಡಿ, ‘ಮಳೆಯ ನೀರನ್ನು ವ್ಯರ್ಥವಾಗಿ ಹರಿದು ಹೋಗದಂತೆ ತಡೆಗಟ್ಟಿ ಶೇಖರಿಸಿ ಕೃಷಿಗೆ ಬಳಸುವುದು ನಮ್ಮ ರೈತರ ಕೆಲಸ. ಅದನ್ನು ತಪ್ಪದೆ ಮಾಡಬೇಕು. ಈ ದೃಷ್ಟಿಯಿಂದ ಕ್ಷೇತ್ರದ ಹಲವು ಕಡೆಗಳಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಿಸಿದ್ದೇವೆ’ ಎಂದರು.</p>.<p>‘ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ವಿಶೇಷ ಕಾಳಜಿ ವಹಿಸಿ ₹ 25 ಲಕ್ಷ ನೀಡಿದ್ದಾರೆ. ಕಲ್ಲೇಶ್ವರ, ಚೌಡೇಶ್ವರಿ ದೇವಸ್ಥಾನಗಳಿಗೂ ಹಣ ಕೊಟ್ಟಿದ್ದೇನೆ. ಎಲ್ಲಾ ಕಡೆ ಸಿಮೆಂಟ್ ರಸ್ತೆಗಳಾಗಿದೆ. ಭರಮಸಾಗರ ಕೆರೆಗೆ ಸೂಳೆಕೆರೆಯಿಂದ ನೀರು ಬರುತ್ತಿತ್ತು. ಅದಕ್ಕಾಗಿ ಓವರ್ ಟ್ಯಾಂಕ್ ಕೂಡ ನಿರ್ಮಾಣವಾಗಿದೆ. ₹ 5 ಕೋಟಿ ವೆಚ್ಚದಲ್ಲಿ ದೊಡ್ಡ ಡ್ಯಾಂ ಕಟ್ಟಿಸಿದ ಪರಿಣಾಮವಾಗಿ ಕೊಳಾಳ್, ಕೊಳಾಳ್ ಗೊಲ್ಲರಹಟ್ಟಿ, ಅರಬಘಟ್ಟ, ಕರಿಯಮ್ಮನಹಳ್ಳಿ, ಹಳೆ ರಂಗಾಪುರ ಸೇರಿದಂತೆ 8-9 ಹಳ್ಳಿಗಳಲ್ಲಿ ಐವತ್ತು ಅಡಿಯಲ್ಲಿ ನೀರು ಸಿಗುತ್ತಿದೆ ಎಂದು ಆ ಭಾಗದ ರೈತರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ತುಂಗಭದ್ರಾ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಯಲ್ಲಿದೆ. ಅಜ್ಜಪ್ಪನಹಳ್ಳಿ ಬಳಿ ₹ 250 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದೆ. ಇದರಿಂದ ಇನ್ನು ಐವತ್ತು ವರ್ಷಗಳ ಕಾಲ ರೈತರಿಗೆ ವಿದ್ಯುತ್ ಸಮಸ್ಯೆಯಾಗುವುದಿಲ್ಲ. ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ನನ್ನ ಅನುದಾನದಿಂದಲೂ ₹ 10 ಲಕ್ಷ ನೀಡುತ್ತೇನೆ’ ಎಂದು ಚಂದ್ರಪ್ಪ ಭರವಸೆ ನೀಡಿದರು.</p>.<p>ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಚಿತ್ರದುರ್ಗ ತಾ.ಪಂ. ಇಒ ರವಿಕುಮಾರ್, ಗ್ರಾ.ಪಂ. ಅಧ್ಯಕ್ಷೆ ರೇಣುಕಮ್ಮ, ಉಪಾಧ್ಯಕ್ಷೆ ದೀಪಾ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಬಿಜೆಪಿ ಭರಮಸಾಗರ ಮಂಡಲ ಅಧ್ಯಕ್ಷ ಎನ್.ಟಿ. ಬಸವರಾಜ್, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪ್ರಮುಖರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>