ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ಭದ್ರತೆಯಲ್ಲಿ ಸಂಚರಿಸಿದ ಸಾರಿಗೆ ಬಸ್

Last Updated 7 ಏಪ್ರಿಲ್ 2021, 3:54 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಾರಿಗೆ ನೌಕರರ ಮುಷ್ಕರದ ನಡುವೆಯೂ ಮೂರು ಬಸ್ ಪ್ರಯಾಣಿಕರಿಗೆ ಬುಧವಾರ ಸೇವೆ ಒದಗಿಸಿದ್ದು, ಪೊಲೀಸ್ ಭದ್ರತೆಯಲ್ಲಿ ಸಂಚರಿಸಿದವು.

ಪೂನಾದಿಂದ ದಾವಣಗೆರೆ ಮಾರ್ಗವಾಗಿ ಬಂದಿದ್ದ ವೋಲ್ವೊ ಬಸ್ ಬೆಂಗಳೂರಿಗೆ ತೆರಳಿತು. ಪ್ರಯಾಣಿಕರು ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದರಿಂದ ಕೊಟ್ಟೂರು ಮಾರ್ಗವಾಗಿ ಹೂವಿನಹಡಗಲಿ ಹಾಗೂ ಮತ್ತೊಂದು ಬಸ್ ಭರಮಸಾಗರ ಮಾರ್ಗವಾಗಿ ದಾವಣಗೆರೆಗೆ ಸಂಚರಿಸಿತು.

ಬಹುತೇಕ ನೌಕರರು ಕರ್ತವ್ಯಕ್ಕೆ ಗೈರು ಹಾಜರು ಆಗಿದ್ದಾರೆ. ನಿತ್ಯ ಜನಜಂಗುಳಿಯಿಂದ ಕೂಡಿರುತ್ತಿದ್ದ ಬಸ್ ನಿಲ್ದಾಣ ಜನರಿಲ್ಲದೇ ಬಿಕೊ ಎನ್ನುತ್ತಿದೆ. ಖಾಸಗಿ ಬಸ್ ಸಂಚಾರ ಎಂದಿನಂತಿದೆ. ಕೆಎಸ್ಆರ್‌ಟಿಸಿ ಬಸ್ ನಡುವೆ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಖಾಸಗಿ ಬಸ್ ಸೇವೆ ಒದಗಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT