ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಜಂಟಿ ಸರ್ವೆ ಮಾಡುತ್ತಿದ್ದಾಗ ಪೊಲೀಸರ ಸಮ್ಮುಖದಲ್ಲೇ ಕೃತ್ಯ ನಡೆದಿದೆ. ಸರ್ಕಾರಿ ನೌಕರರ ಮೇಲೆ ಹಲ್ಲೆ, ಕೊಲೆ ಹಾಗೂ ಕೊಲೆ ಬೆದರಿಕೆ ನಿರಂತರವಾಗಿ ನಡೆಯುತ್ತಿದೆ. ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ಇಲ್ಲವಾಗಿದೆ. ಕಂದಾಯ, ಆರೋಗ್ಯ ಹಾಗೂ ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಇಂತಹ ಪರಿಸ್ಥಿತಿ ಎದುರಿಸಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.