‘ಈ ವರ್ಷ ವಾಣಿ ವಿಲಾಸ ಜಲಾಶಯಕ್ಕೆ ಕೇವಲ ಆರು ಅಡಿ ನೀರು ಬಂದಿದ್ದು, ಹಿರಿಯೂರು, ಚಳ್ಳಕೆರೆ, ಚಿತ್ರದುರ್ಗ ನಗರಗಳ ಜನರಿಗೆ ಈ ನೀರು ಕುಡಿಯಲು ಸಾಕಾಗುತ್ತದೆ. ಅಚ್ಚುಕಟ್ಟು ಪ್ರದೇಶದ ರೈತರು ಹಿಂದಿನ ವರ್ಷಕ್ಕಿಂತ ಹೆಚ್ಚು ಸಂಕಷ್ಟಕ್ಕೆ ಒಳಗಾಗುವ ಅಪಾಯವಿದೆ. 12 ಸಾವಿರ ಎಕರೆ ತೆಂಗು, ಅಷ್ಟೇ ಪ್ರಮಾಣದಲ್ಲಿ ಅಡಿಕೆ ಬೆಳೆ ಒಣಗಿದ್ದು, ತಕ್ಷಣಕ್ಕೆ ಬೆಳೆಗಾರರಿಗೆ ಪರಿಹಾರ ಕೊಡಿಸಲು ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದು ರೈತಸಂಘದ ಅಧ್ಯಕ್ಷ ಹೊರಕೇರಪ್ಪ ಸ್ವಾಮೀಜಿಗೆ ಮನವಿ ಮಾಡಿದರು.