ಗುರುವಾರ ಬೆಳಿಗ್ಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ್ದ ಓಂಕಾರಪ್ಪ ಅವರಿಗೆ ಲಂಚ ನೀಡುವಂತೆ ನರೇಂದ್ರಬಾಬು ಪೀಡಿಸಿದ್ದಾರೆ. ಇದರಿಂದ ಬೇಸರಗೊಂಡ ಓಂಕಾರಪ್ಪ ಎಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಲಂಚ ನೀಡುವಾಗ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಬಸವರಾಜ ಆರ್. ಮಗದುಮ್, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಹಸನ್ಸಾಬ್, ಪ್ರವೀಣಕುಮಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.