<p>ಪ್ರಜಾವಾಣಿ ವಾರ್ತೆ</p>.<p>ಮೊಳಕಾಲ್ಮುರು: ನೂತನವಾಗಿ ಕೈಗೆತ್ತಿಕೊಳ್ಳಲಿರುವ ತಾಲ್ಲೂಕಿನ ಬಾಂಡ್ರಾವಿ-ಹನುಮಾಪುರ ಬೈಪಾಸ್ ರಸ್ತೆ ಕಾಮಗಾರಿಯಲ್ಲಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು.</p>.<p>ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಈಗಿನ ಆದೇಶದಂತೆ ಜಮೀನಿನ ಮೌಲ್ಯದ ನಾಲ್ಕು ಪಟ್ಟು ಹಣವನ್ನು ಪರಿಹಾರವಾಗಿ ನೀಡಲಾಗುವುದು. ಈ ರಸ್ತೆ ನಿರ್ಮಾಣದಿಂದ ಒಟ್ಟು 16. 2 ಎಕರೆ ಜಮೀನು ಸ್ವಾಧೀನವಾಗಲಿದೆ. ಇದಕ್ಕೆ ಅಂದಾಜು ₹ 2 ಕೋಟಿ ಅಗತ್ಯವಿದೆ. ಪರಿಹಾರದ ಹಣ ಪ್ರಸ್ತುತ ಜಿಲ್ಲಾ ಉಪ ವಿಭಾಗಾಧಿಕಾರಿ ಖಾತೆಯಲ್ಲಿದ್ದು, ರೈತರು ಒಪ್ಪಿಗೆ ಸೂಚಿಸಿದಲ್ಲಿ ಖಾತೆಗಳಿಗೆ ಜಮೆ ಮಾಡಿ ರಸ್ತೆ ಕಾಮಗಾರಿ ಆರಂಭಿಸಲಾಗುವುದು ಎಂದರು.</p>.<p>ಕೆಲ ರೈತರು ಪರಿಹಾರ ಕಡಿಮೆಯಾಗಿದೆ. ನ್ಯಾಯಾಲಯ ಮೊರೆ ಹೋಗುವುದಾಗಿ ಹೇಳಿದರು.</p>.<p>‘ನ್ಯಾಯಾಲಯ ಮೊರೆ ಹೋದಲ್ಲಿ ಹೆಚ್ಚುವರಿ ಪರಿಹಾರ ಕೊಡುವ ಕುರಿತು ಪರಿಶೀಲಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ಬರುತ್ತದೆ. ಆಗ ಸಾಧ್ಯವಿದ್ದಲ್ಲಿ ಹೆಚ್ಚಿನ ಪರಿಹಾರ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಹೇಳಿದರು.</p>.<p>ಗಣಿಬಾಧಿತ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಅನುದಾನ ತಾಲ್ಲೂಕಿಗೆ ಮಂಜೂರಾಗಿದೆ. ಈ ಭಾಗದಲ್ಲಿನ ಸಂಚಾರ ಅವ್ಯವಸ್ಥೆ ತಡೆಯಲು ಸೇವಾ ರಸ್ತೆ ನಿರ್ಮಾಣಕ್ಕೆ ಇಷ್ಟು ದೊಡ್ಡ ಪ್ರಮಾಣದ ಅನುದಾನ ನೀಡಲಾಗಿದೆ. ಈ ರಸ್ತೆಯಿಂದ ಸಾಕಷ್ಟು ಅನುಕೂಲವಾಗಲಿದ್ದು, ಕಾಮಗಾರಿ ಆರಂಭಕ್ಕೆ ಅನುವು ಮಾಡಿಕೊಡಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಮನವಿ ಮಾಡಿದರು.</p>.<p>ಕೆಲ ರೈತರು ಪರಿಹಾರಕ್ಕೆ ಒಮ್ಮತ ಸೂಚಿಸದೇ ಸಭೆಯಿಂದ ಹೊರ ನಡೆದರು.</p>.<p>ಉಪ ವಿಭಾಗಾಧಿಕಾರಿ ಮಹಮದ್ ಜಿಲಾನಿ, ತಹಶೀಲ್ದಾರ್ ಟಿ. ಜಗದೀಶ್, ಲೋಕೋಪಯೋಗಿ ಎಇಇ ಮೋನಪ್ಪ, ಎಂಜಿನಿಯರ್ ಲಕ್ಷ್ಮಿನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಮೊಳಕಾಲ್ಮುರು: ನೂತನವಾಗಿ ಕೈಗೆತ್ತಿಕೊಳ್ಳಲಿರುವ ತಾಲ್ಲೂಕಿನ ಬಾಂಡ್ರಾವಿ-ಹನುಮಾಪುರ ಬೈಪಾಸ್ ರಸ್ತೆ ಕಾಮಗಾರಿಯಲ್ಲಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು.</p>.<p>ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಈಗಿನ ಆದೇಶದಂತೆ ಜಮೀನಿನ ಮೌಲ್ಯದ ನಾಲ್ಕು ಪಟ್ಟು ಹಣವನ್ನು ಪರಿಹಾರವಾಗಿ ನೀಡಲಾಗುವುದು. ಈ ರಸ್ತೆ ನಿರ್ಮಾಣದಿಂದ ಒಟ್ಟು 16. 2 ಎಕರೆ ಜಮೀನು ಸ್ವಾಧೀನವಾಗಲಿದೆ. ಇದಕ್ಕೆ ಅಂದಾಜು ₹ 2 ಕೋಟಿ ಅಗತ್ಯವಿದೆ. ಪರಿಹಾರದ ಹಣ ಪ್ರಸ್ತುತ ಜಿಲ್ಲಾ ಉಪ ವಿಭಾಗಾಧಿಕಾರಿ ಖಾತೆಯಲ್ಲಿದ್ದು, ರೈತರು ಒಪ್ಪಿಗೆ ಸೂಚಿಸಿದಲ್ಲಿ ಖಾತೆಗಳಿಗೆ ಜಮೆ ಮಾಡಿ ರಸ್ತೆ ಕಾಮಗಾರಿ ಆರಂಭಿಸಲಾಗುವುದು ಎಂದರು.</p>.<p>ಕೆಲ ರೈತರು ಪರಿಹಾರ ಕಡಿಮೆಯಾಗಿದೆ. ನ್ಯಾಯಾಲಯ ಮೊರೆ ಹೋಗುವುದಾಗಿ ಹೇಳಿದರು.</p>.<p>‘ನ್ಯಾಯಾಲಯ ಮೊರೆ ಹೋದಲ್ಲಿ ಹೆಚ್ಚುವರಿ ಪರಿಹಾರ ಕೊಡುವ ಕುರಿತು ಪರಿಶೀಲಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ಬರುತ್ತದೆ. ಆಗ ಸಾಧ್ಯವಿದ್ದಲ್ಲಿ ಹೆಚ್ಚಿನ ಪರಿಹಾರ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಹೇಳಿದರು.</p>.<p>ಗಣಿಬಾಧಿತ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಅನುದಾನ ತಾಲ್ಲೂಕಿಗೆ ಮಂಜೂರಾಗಿದೆ. ಈ ಭಾಗದಲ್ಲಿನ ಸಂಚಾರ ಅವ್ಯವಸ್ಥೆ ತಡೆಯಲು ಸೇವಾ ರಸ್ತೆ ನಿರ್ಮಾಣಕ್ಕೆ ಇಷ್ಟು ದೊಡ್ಡ ಪ್ರಮಾಣದ ಅನುದಾನ ನೀಡಲಾಗಿದೆ. ಈ ರಸ್ತೆಯಿಂದ ಸಾಕಷ್ಟು ಅನುಕೂಲವಾಗಲಿದ್ದು, ಕಾಮಗಾರಿ ಆರಂಭಕ್ಕೆ ಅನುವು ಮಾಡಿಕೊಡಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಮನವಿ ಮಾಡಿದರು.</p>.<p>ಕೆಲ ರೈತರು ಪರಿಹಾರಕ್ಕೆ ಒಮ್ಮತ ಸೂಚಿಸದೇ ಸಭೆಯಿಂದ ಹೊರ ನಡೆದರು.</p>.<p>ಉಪ ವಿಭಾಗಾಧಿಕಾರಿ ಮಹಮದ್ ಜಿಲಾನಿ, ತಹಶೀಲ್ದಾರ್ ಟಿ. ಜಗದೀಶ್, ಲೋಕೋಪಯೋಗಿ ಎಇಇ ಮೋನಪ್ಪ, ಎಂಜಿನಿಯರ್ ಲಕ್ಷ್ಮಿನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>