<p><strong>ಚಿತ್ರದುರ್ಗ</strong>: ‘ಸುಡುಗಾಡಿಗೆ ಹೋಗಿ ತೆಂಗಿನ ಕಾಯಿ ಒಡೆದರೂ ಜಿಎಸ್ಟಿ ಕಟ್ಟಬೇಕಾಗಿದೆ. ದೇಶದ ಶೇ 70ರಷ್ಟು ಜನರು ಜಿಎಸ್ಟಿ ಪಾವತಿಸುತ್ತಿದ್ದು, ಇದರಿಂದ ಶ್ರೀಮಂತರಿಗೆ ಮಾತ್ರ ಅನುಕೂಲವಾಗುತ್ತಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.</p>.<p>‘ಹಾಲು, ಮೊಸರು ಅರಿಶಿಣ–ಕುಂಕುಮಕ್ಕೂ ಜಿಎಸ್ಟಿ ತೆರಬೇಕಾಗಿದೆ. ಅಗತ್ಯ ವಸ್ತುಗಳಿಗೂ ತೆರಿಗೆ ಕಟ್ಟಬೇಕಾಗಿದೆ. ಜನರಿಗೆ ಸುಳ್ಳು ಹೇಳಿಕೊಂಡು, ಪಿಕ್ಚರ್ ನಡೆಸಿಕೊಂಡು ಹೋಗುತ್ತಿದ್ದಾರೆ. ಸಾರ್ವಜನಿಕರು ಇದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಶ್ರೀಮಂತರ ಅಂದಾಜು ₹ 16.50 ಲಕ್ಷ ಕೋಟಿ ಸಾಲ ಮನ್ನಾ ಆಗಿದೆ. ರೈತರಿಗೆ, ಬಡವರಿಗೆ, ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಯಾವುದೇ ಅನುಕೂಲ ಮಾಡುತ್ತಿಲ್ಲ. ನಗದು ರಹಿತ ವಹಿವಾಟು ಎಂಬುದೇ ಮೋಸದ ವ್ಯವಹಾರ. ಎಲ್ಲೆಡೆ ನಕಲಿ ನೋಟುಗಳ ವಹಿವಾಟು ಪತ್ತೆಯಾಗಿದೆ. ₹ 26,000 ಕೋಟಿಯಷ್ಟು ₹ 2,000 ಮುಖಬೆಲೆಯ ನಕಲಿ ನೋಟು, ₹1.14 ಲಕ್ಷ ಕೋಟಿಯಷ್ಟು ₹ 500 ಮುಖಬೆಲೆಯ ನಕಲಿ ನೋಟುಗಳನ್ನು ಆರ್ಬಿಐ ಪತ್ತೆ ಮಾಡಿದೆ’ ಎಂದರು.</p>.<p>ಪ್ರಲ್ಹಾದ ಜೋಶಿ ವಿರುದ್ಧ ಆಕ್ರೋಶ: ‘ರಾಜ್ಯ ಸರ್ಕಾರಕ್ಕೆ ಅಕ್ಕಿ ಹಂಚುವ ಯೋಗ್ಯತೆ ಇಲ್ಲ’ ಎಂದು ಹೇಳಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಸಂತೋಷ್ ಲಾಡ್ ಕಿಡಿಕಾರಿದರು. ‘ಕೇಂದ್ರ ಸಚಿವರಾಗಿ ಈ ರೀತಿ ಮಾತನಾಡುವುದು ಸರಿಯೇ? ಕೇಂದ್ರ ಸರ್ಕಾರ ರಾಜ್ಯಗಳಿಗೆ ನರೇಗಾ ಹಣ ಕೊಡುತ್ತಿಲ್ಲ. ನಾವು ಕೂಡ ಹಾಗೆಯೇ ಮಾತನಾಡಬಹುದಾ’ ಎಂದು ಪ್ರಶ್ನಿಸಿದರು.</p>.<p>‘ದೇಶದಲ್ಲಿ ಬಡತನ ಹೆಚ್ಚಳವಾಗುತ್ತಿರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳುತ್ತಾರೆ. ಆದರೆ, ಪ್ರಧಾನಿ ಮೋದಿ ಅವರು ಬಡತನ ನಿರ್ಮೂಲನೆಯಾಗಿದೆ ಎಂದು ಹೇಳುತ್ತಿದ್ದಾರೆ. ಇಬ್ಬರಲ್ಲಿ ಯಾರ ಹೇಳಿಕೆ ಸರಿ’ ಎಂದು ಕೇಳಿದರು. </p>.<p>ಮುಖ್ಯಮಂತ್ರಿ ಬದಲಾವಣೆ ಕುರಿತಾದ ಪ್ರಶ್ನೆಗೆ ‘ಆ ಬಗ್ಗೆ ನಾನು ಏನೂ ಹೇಳುವುದಿಲ್ಲ. ಬಹಿರಂಗವಾಗಿ ಯಾವುದೇ ಹೇಳಿಕೆ ಕೊಡದಂತೆ ನಮ್ಮ ಶಾಸಕರಿಗೂ ಮನವಿ ಮಾಡಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಸುಡುಗಾಡಿಗೆ ಹೋಗಿ ತೆಂಗಿನ ಕಾಯಿ ಒಡೆದರೂ ಜಿಎಸ್ಟಿ ಕಟ್ಟಬೇಕಾಗಿದೆ. ದೇಶದ ಶೇ 70ರಷ್ಟು ಜನರು ಜಿಎಸ್ಟಿ ಪಾವತಿಸುತ್ತಿದ್ದು, ಇದರಿಂದ ಶ್ರೀಮಂತರಿಗೆ ಮಾತ್ರ ಅನುಕೂಲವಾಗುತ್ತಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.</p>.<p>‘ಹಾಲು, ಮೊಸರು ಅರಿಶಿಣ–ಕುಂಕುಮಕ್ಕೂ ಜಿಎಸ್ಟಿ ತೆರಬೇಕಾಗಿದೆ. ಅಗತ್ಯ ವಸ್ತುಗಳಿಗೂ ತೆರಿಗೆ ಕಟ್ಟಬೇಕಾಗಿದೆ. ಜನರಿಗೆ ಸುಳ್ಳು ಹೇಳಿಕೊಂಡು, ಪಿಕ್ಚರ್ ನಡೆಸಿಕೊಂಡು ಹೋಗುತ್ತಿದ್ದಾರೆ. ಸಾರ್ವಜನಿಕರು ಇದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಶ್ರೀಮಂತರ ಅಂದಾಜು ₹ 16.50 ಲಕ್ಷ ಕೋಟಿ ಸಾಲ ಮನ್ನಾ ಆಗಿದೆ. ರೈತರಿಗೆ, ಬಡವರಿಗೆ, ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಯಾವುದೇ ಅನುಕೂಲ ಮಾಡುತ್ತಿಲ್ಲ. ನಗದು ರಹಿತ ವಹಿವಾಟು ಎಂಬುದೇ ಮೋಸದ ವ್ಯವಹಾರ. ಎಲ್ಲೆಡೆ ನಕಲಿ ನೋಟುಗಳ ವಹಿವಾಟು ಪತ್ತೆಯಾಗಿದೆ. ₹ 26,000 ಕೋಟಿಯಷ್ಟು ₹ 2,000 ಮುಖಬೆಲೆಯ ನಕಲಿ ನೋಟು, ₹1.14 ಲಕ್ಷ ಕೋಟಿಯಷ್ಟು ₹ 500 ಮುಖಬೆಲೆಯ ನಕಲಿ ನೋಟುಗಳನ್ನು ಆರ್ಬಿಐ ಪತ್ತೆ ಮಾಡಿದೆ’ ಎಂದರು.</p>.<p>ಪ್ರಲ್ಹಾದ ಜೋಶಿ ವಿರುದ್ಧ ಆಕ್ರೋಶ: ‘ರಾಜ್ಯ ಸರ್ಕಾರಕ್ಕೆ ಅಕ್ಕಿ ಹಂಚುವ ಯೋಗ್ಯತೆ ಇಲ್ಲ’ ಎಂದು ಹೇಳಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಸಂತೋಷ್ ಲಾಡ್ ಕಿಡಿಕಾರಿದರು. ‘ಕೇಂದ್ರ ಸಚಿವರಾಗಿ ಈ ರೀತಿ ಮಾತನಾಡುವುದು ಸರಿಯೇ? ಕೇಂದ್ರ ಸರ್ಕಾರ ರಾಜ್ಯಗಳಿಗೆ ನರೇಗಾ ಹಣ ಕೊಡುತ್ತಿಲ್ಲ. ನಾವು ಕೂಡ ಹಾಗೆಯೇ ಮಾತನಾಡಬಹುದಾ’ ಎಂದು ಪ್ರಶ್ನಿಸಿದರು.</p>.<p>‘ದೇಶದಲ್ಲಿ ಬಡತನ ಹೆಚ್ಚಳವಾಗುತ್ತಿರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳುತ್ತಾರೆ. ಆದರೆ, ಪ್ರಧಾನಿ ಮೋದಿ ಅವರು ಬಡತನ ನಿರ್ಮೂಲನೆಯಾಗಿದೆ ಎಂದು ಹೇಳುತ್ತಿದ್ದಾರೆ. ಇಬ್ಬರಲ್ಲಿ ಯಾರ ಹೇಳಿಕೆ ಸರಿ’ ಎಂದು ಕೇಳಿದರು. </p>.<p>ಮುಖ್ಯಮಂತ್ರಿ ಬದಲಾವಣೆ ಕುರಿತಾದ ಪ್ರಶ್ನೆಗೆ ‘ಆ ಬಗ್ಗೆ ನಾನು ಏನೂ ಹೇಳುವುದಿಲ್ಲ. ಬಹಿರಂಗವಾಗಿ ಯಾವುದೇ ಹೇಳಿಕೆ ಕೊಡದಂತೆ ನಮ್ಮ ಶಾಸಕರಿಗೂ ಮನವಿ ಮಾಡಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>