‘ವಿದ್ಯಾರ್ಥಿಗಳಿಗೆ ತೊಂದರೆ ಕೊಡಬೇಕೆಂಬ ಉದ್ದೇಶ ತಮ್ಮದಲ್ಲ. ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲು ತರಗತಿ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದೇವೆ. ಪೋಷಕರು, ವಿದ್ಯಾರ್ಥಿಗಳು ಬೆಂಬಲಿಸಬೇಕು’ ಎಂದು ಪ್ರತಿಭಟನಕಾರರು ಮನವಿ ಮಾಡಿದರು. ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಆರ್. ಶಿವಣ್ಣ, ಉಪನ್ಯಾಸಕರಾದ ದಯಾನಂದ್, ಜಯಶ್ರೀ, ನಿಶಾಫಾತಿಮಾ ಅವರೂ ಈ ಸಂದರ್ಭದಲ್ಲಿ ಇದ್ದರು.