ಕೋವಿಡ್ 2ನೇ ಅಲೆಯಿಂದಾಗಿ ಏಪ್ರಿಲ್ 24ರಂದು ಲಾಕ್ಡೌನ್ ಘೋಷಣೆಯಾಗಿದ್ದರಿಂದ ದೇವಾಲಯದ ಬಾಗಿಲು ಮುಚ್ಚಲಾಗಿತ್ತು. ದೇವಾಲಯದ ಬಾಗಿಲು ತೆರೆಯಲು ಸರ್ಕಾರ ಅವಕಾಶ ನೀಡಿದ್ದರಿಂದ ಪಟ್ಟಣದ ಒಳಮಠ, ಹೊರಮಠ, ಏಕಾಂತೇಶ್ವರ ದೇವಾಲಯ, ಈಶ್ವರ ದೇವಾಲಯ ಸೇರಿದಂತೆ ಪಟ್ಟಣದಲ್ಲಿರುವ ಎಲ್ಲ ದೇವಾಲಯಗಳನ್ನು ಭಾನುವಾರ ತೆರೆದು ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ದೇವಾಲಯಗಳ ಪ್ರತಿಯೊಂದು ಸ್ಥಳಕ್ಕೂ ಸ್ಯಾನಿಟೈಸ್ ಸಿಂಪಡಣೆ ಮಾಡಲಾಯಿತು.