ಜಿಲ್ಲೆಯ ಇತಿಹಾಸ ಪ್ರಸಿದ್ಧ ತಿಪ್ಪೇರುದ್ರಸ್ವಾಮಿ ದೇವಾಲಯವು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ‘ಎ’ ಗ್ರೇಡ್ ಮಾನ್ಯತೆ ಹೊಂದಿದೆ. ಮಧ್ಯ ಕರ್ನಾಟಕದಲ್ಲಿ ದೊಡ್ಡ ಜಾತ್ರಾ ಮಹೋತ್ಸವ ನಡೆಯುವ ಸ್ಥಳ. ಈ ದೇವಾಲಯಕ್ಕೆ ರಾಜ್ಯ ಸೇರಿ ನೆರೆಯ ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರಗಳಿಂದ ಭಕ್ತರು ಭೇಟಿ ನೀಡುತ್ತಾರೆ. ಇತರೆ ದೇವಾಲಯಗಳಂತೆ ಇಲ್ಲಿನ ದೇವಾಲಯವನ್ನು ಅಭಿವೃದ್ಧಿಗೊಳಿಸಿ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಮಾಡಬೇಕಿದೆ. ಈ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದರು.