ಭಕ್ತರ ಪ್ರವೇಶ ತಡೆಯಲು ಪೋಲಿಸ್ ಸರ್ಪಗಾವಲು: ‘ರಥಕ್ಕೆ ಮತ್ತು ಜಾತ್ರೆಗೆ ಡಿವೈಎಸ್ಪಿ ಮಟ್ಟದ ಭದ್ರತೆಯನ್ನು ಒದಗಿಸಲಾಗುವುದು. ಪಟ್ಟಣದ 7 ಸ್ಥಳಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆಯಲಾಗುವುದು. ಜಾತ್ರೆಯನ್ನು 18 ಸೆಕ್ಟರ್ಗಳಾಗಿ ವಿಂಗಡಿಸಿ ಪ್ರತಿ ಸೆಕ್ಟರ್ಗೂ ಡಿವೈಎಸ್ಪಿ, ಇನ್ಸ್ಪೆಕ್ಟರ್ ಸೇರಿ ಸಿಬ್ಬಂದಿ ನೇಮಿಸಲಾಗುವುದು. 10 ಸಂಚಾರ ಪೊಲೀಸ್ ದಳ, 20 ಸಹಾಯವಾಣಿಗಳು, 10 ಸ್ಕೈ ಸೆಂಟರ್ಗಳು, 3 ಕೆಎಸ್ಆರ್ಪಿ ತುಕಡಿಗಳು, 10 ಡಿಎಆರ್ ತುಕಡಿ,2 ಅಗ್ನಿಶಾಮಕ ದಳ, 2 ಆಂಬುಲೆನ್ಸ್, 1500ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸುವ ಯೋಜನೆ ರೂಪಿಸಿದ್ದೇವೆ. ಬಹುತೇಕ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು’ ಎಂದು ಡಿವೈಎಸ್ಪಿ ಕೆ.ವಿ. ಶ್ರೀಧರ್ ತಿಳಿಸಿದರು.