ತಾಲ್ಲೂಕಿನ ಬಹದ್ದೂರ್ ಘಟ್ಟದ ಕಾರ್ಯಕ್ರಮವೊಂದರಲ್ಲಿ ಸೋಮವಾರ ಮಾತನಾಡಿದ ಅವರು, ‘ಅಧಿಕಾರ ವಹಿಸಿಕೊಂಡ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡಿ ಋಣ ಮುಕ್ತರನ್ನಾಗಿಸುತ್ತೇನೆ ಎಂದು ಯಡಿಯೂರಪ್ಪ ಅವರು ಹಿಂದೆ ಭರವಸೆ ನೀಡಿದ್ದರು. ರಾಜ್ಯದಲ್ಲಿ ನೆರೆಯಿಂದ ತೊಂದರೆ ಉಂಟಾಗಿರುವ ಕಾರಣ ಬೇಕಾದರೆ ಇನ್ನೂ ಸಮಯ ತೆಗೆದುಕೊಳ್ಳಲಿ. ಆದರೆ, ಕೊಟ್ಟ ಮಾತು ಯಾವ ಕಾರಣಕ್ಕೂ ತಪ್ಪದೇ, ವಿಶ್ವಾಸ ಉಳಿಸಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.