‘ಜಿಲ್ಲಾ ಆರೋಗ್ಯಾಧಿಕಾರಿ ತಪ್ಪು ಮಾಡಿದರೆ ಅಥವಾ ಮಾತು ಕೇಳದಿದ್ದರೆ ಅಧಿಕಾರ ಚಲಾಯಿಸಬೇಕು. ಇದು ಜನಪ್ರತಿನಿಧಿಗಳ ಹೊಣೆಗಾರಿಕೆ ಕೂಡ ಹೌದು. ಕರ್ತವ್ಯ ಪ್ರಜ್ಞೆ ಮರೆತು ಆಸ್ಪತ್ರೆ ತೆರೆಯಲು ಅವಕಾಶ ನೀಡುವುದಿಲ್ಲ ಎಂಬುದು ತಪ್ಪು. 50 ಹಾಸಿಗೆಯ ಆಸ್ಪತ್ರೆಗೆ ಸಿದ್ಧತೆ ನಡೆಸುತ್ತಿದ್ದ ಜಿಲ್ಲಾ ಆರೋಗ್ಯಾಧಿಕಾರಿ ವಿರುದ್ಧ ದಬ್ಬಾಳಿಕೆ ಮಾಡಿದ್ದು ಖಂಡನೀಯ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.