<p><strong>ಶ್ರೀರಾಂಪುರ</strong>: ಸಮೀಪದ ಬೆಲಗೂರು, ಸೋಮಸಂದ್ರ, ಶ್ರೀರಾಂಪುರ ಸೇರಿದಂತೆ ವಿವಿಧೆಡೆ ಶುಕ್ರವಾರ ಹನುಮ ಜಯಂತಿ ಕಾರ್ಯಕ್ರಮ ಶ್ರದ್ದಾಭಕ್ತಿಯಿಂದ ನೆರವೇರಿತು. ಸಾವಿರಾರು ಭಕ್ತರು ಆಂಜನೇಯ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದರು.</p>.<p>ಆಂಜನೇಯ ದೇವಾಲಯಗಳಲ್ಲಿ ಬೆಳಿಗ್ಗೆಯಿಂದಲೇ ಅಭೀಷೇಕ, ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ವಸಂತ ಸೇವೆಯನ್ನು ನೆಡೆಸಲಾಯಿತು.</p>.<p><strong>ಬೆಲಗೂರು: </strong>ಇಲ್ಲಿನ ಅವಧೂತ ಸದ್ಗುರು ಬಿಂಧು ಮಾಧವ ಶರ್ಮಾ ಅವರ ಆರಾಧ್ಯ ದೈವ ವೀರ ಪ್ರತಾಪ ಆಂಜನೇಯ ದೇಗುಲದಲ್ಲಿ ಹನುಮಜಯಂತಿ ಅಂಗವಾಗಿ ವಿಶೇಷ ಹೋಮ ಹವನ ಸೇರಿದಂತೆ ಅಲಂಕಾರ ಮಾಡಲಾಗಿತ್ತು. ಈ ಸಂಬಂಧ ಗುರುವಾರ ರಾತ್ರಿ ಲಕ್ಷ್ಮೀ ಕಲ್ಯಾಣೋತ್ಸವ ಹಾಗೂ ಸೀತಾ ಕಲ್ಯಾಣೋತ್ಸವ ನಡೆಸಲಾಯಿತು.</p>.<p>ಶುಕ್ರವಾರ 64 ಅಡಿ ಎತ್ತರದ 2 ಬೃಹತ್ ರಥಗಳಲ್ಲಿ ಲಕ್ಷ್ಮೀ ನಾರಾಯಣ ಹಾಗೂ ವೀರ ಪ್ರತಾಪ ಆಂಜನೇಯ ಸ್ವಾಮಿಯನ್ನು ಪ್ರತಿಷ್ಠಾಪಿಸಲಾಯಿತು. ಆಗಮಿಸಿದ ಸಾವಿರಾರು ಭಕ್ತರು ರಥವನ್ನು ಎಳೆದು, ರಥಕ್ಕೆ ಬಾಳೆಹಣ್ಣು ತೂರುವ ಮೂಲಕ ಮೂಲಕ ಭಕ್ತಿ ಸಮರ್ಪಿಸಿದರು.</p>.<p><strong>ಸೋಮಸಂದ್ರ: </strong>ಇಲ್ಲಿನ ಆಂಜನೇಯ ಸ್ವಾಮಿ ದೇಗುಲದಲ್ಲಿ ಶುಕ್ರವಾರ ಹನುಮ ಜಯಂತಿ ಅಂಗವಾಗಿ ಗರ್ಭಗುಡಿಯಲ್ಲಿರುವ ಬೃಹದಾಕಾರದ ಹನುಮನ ಮೂರ್ತಿಗೆ ಬೆಳ್ಳಿ ಕವಚ ತೊಡಿಸಿ ವಿಶೇಷ ಅಲಂಕಾರ ಮಾಡಲಾಗಿತ್ತು. ಈ ಜಾತ್ರಾ ಮಹೋತ್ಸವಕ್ಕೆ ಕೈನಡು ಗ್ರಾಮ ದೇವತೆ ಇಂದ್ರಾಣಿ ಕರಿಯಮ್ಮ ದೇವಿಯನ್ನು ಕರೆತರಲಾಗಿತ್ತು.</p>.<p>ಆಲಂಕೃತ ರಥದಲ್ಲಿ ಆಂಜನೇಯ ಸ್ವಾಮಿ ಹಾಗೂ ಇಂದ್ರಾಣಿ ಕರಿಯಮ್ಮ ದೇವಿಯನ್ನು ಪ್ರತಿಷ್ಠಾಪಿಸಿ, ಭಕ್ತರು ಎಳೆದರು. ಬೆಂಗಳೂರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. </p>.<p>ಶ್ರೀರಾಂಪುರದ ಕೋಟೆ ಆಂಜನೇಯ ಸ್ವಾಮಿ ರಥೋತ್ಸವವೂ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಾಂಪುರ</strong>: ಸಮೀಪದ ಬೆಲಗೂರು, ಸೋಮಸಂದ್ರ, ಶ್ರೀರಾಂಪುರ ಸೇರಿದಂತೆ ವಿವಿಧೆಡೆ ಶುಕ್ರವಾರ ಹನುಮ ಜಯಂತಿ ಕಾರ್ಯಕ್ರಮ ಶ್ರದ್ದಾಭಕ್ತಿಯಿಂದ ನೆರವೇರಿತು. ಸಾವಿರಾರು ಭಕ್ತರು ಆಂಜನೇಯ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದರು.</p>.<p>ಆಂಜನೇಯ ದೇವಾಲಯಗಳಲ್ಲಿ ಬೆಳಿಗ್ಗೆಯಿಂದಲೇ ಅಭೀಷೇಕ, ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ವಸಂತ ಸೇವೆಯನ್ನು ನೆಡೆಸಲಾಯಿತು.</p>.<p><strong>ಬೆಲಗೂರು: </strong>ಇಲ್ಲಿನ ಅವಧೂತ ಸದ್ಗುರು ಬಿಂಧು ಮಾಧವ ಶರ್ಮಾ ಅವರ ಆರಾಧ್ಯ ದೈವ ವೀರ ಪ್ರತಾಪ ಆಂಜನೇಯ ದೇಗುಲದಲ್ಲಿ ಹನುಮಜಯಂತಿ ಅಂಗವಾಗಿ ವಿಶೇಷ ಹೋಮ ಹವನ ಸೇರಿದಂತೆ ಅಲಂಕಾರ ಮಾಡಲಾಗಿತ್ತು. ಈ ಸಂಬಂಧ ಗುರುವಾರ ರಾತ್ರಿ ಲಕ್ಷ್ಮೀ ಕಲ್ಯಾಣೋತ್ಸವ ಹಾಗೂ ಸೀತಾ ಕಲ್ಯಾಣೋತ್ಸವ ನಡೆಸಲಾಯಿತು.</p>.<p>ಶುಕ್ರವಾರ 64 ಅಡಿ ಎತ್ತರದ 2 ಬೃಹತ್ ರಥಗಳಲ್ಲಿ ಲಕ್ಷ್ಮೀ ನಾರಾಯಣ ಹಾಗೂ ವೀರ ಪ್ರತಾಪ ಆಂಜನೇಯ ಸ್ವಾಮಿಯನ್ನು ಪ್ರತಿಷ್ಠಾಪಿಸಲಾಯಿತು. ಆಗಮಿಸಿದ ಸಾವಿರಾರು ಭಕ್ತರು ರಥವನ್ನು ಎಳೆದು, ರಥಕ್ಕೆ ಬಾಳೆಹಣ್ಣು ತೂರುವ ಮೂಲಕ ಮೂಲಕ ಭಕ್ತಿ ಸಮರ್ಪಿಸಿದರು.</p>.<p><strong>ಸೋಮಸಂದ್ರ: </strong>ಇಲ್ಲಿನ ಆಂಜನೇಯ ಸ್ವಾಮಿ ದೇಗುಲದಲ್ಲಿ ಶುಕ್ರವಾರ ಹನುಮ ಜಯಂತಿ ಅಂಗವಾಗಿ ಗರ್ಭಗುಡಿಯಲ್ಲಿರುವ ಬೃಹದಾಕಾರದ ಹನುಮನ ಮೂರ್ತಿಗೆ ಬೆಳ್ಳಿ ಕವಚ ತೊಡಿಸಿ ವಿಶೇಷ ಅಲಂಕಾರ ಮಾಡಲಾಗಿತ್ತು. ಈ ಜಾತ್ರಾ ಮಹೋತ್ಸವಕ್ಕೆ ಕೈನಡು ಗ್ರಾಮ ದೇವತೆ ಇಂದ್ರಾಣಿ ಕರಿಯಮ್ಮ ದೇವಿಯನ್ನು ಕರೆತರಲಾಗಿತ್ತು.</p>.<p>ಆಲಂಕೃತ ರಥದಲ್ಲಿ ಆಂಜನೇಯ ಸ್ವಾಮಿ ಹಾಗೂ ಇಂದ್ರಾಣಿ ಕರಿಯಮ್ಮ ದೇವಿಯನ್ನು ಪ್ರತಿಷ್ಠಾಪಿಸಿ, ಭಕ್ತರು ಎಳೆದರು. ಬೆಂಗಳೂರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. </p>.<p>ಶ್ರೀರಾಂಪುರದ ಕೋಟೆ ಆಂಜನೇಯ ಸ್ವಾಮಿ ರಥೋತ್ಸವವೂ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>