<p><strong>ಚಿತ್ರದುರ್ಗ: </strong>ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಹರ್ ಘರ್ ತಿರಂಗ ಅಭಿಯಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬಿಜೆಪಿ ವತಿಯಿಂದ ನಗರದಲ್ಲಿ ಗುರುವಾರ ದ್ವಿಚಕ್ರ ವಾಹನ ಜಾಥಾ ನಡೆಸಲಾಯಿತು.</p>.<p>ಚಂದ್ರವಳ್ಳಿಯಿಂದ ಆರಂಭವಾದ ಜಾಥಾ ಕನಕವೃತ್ತ, ಹೊಳಲ್ಕೆರೆ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿ ವೃತ್ತ, ಬಿ.ಡಿ.ರಸ್ತೆ, ಕೆಳಗೋಟೆ ಮಾರ್ಗವಾಗಿ ಹಳೆ ಮಾಧ್ಯಮಿಕ ಶಾಲಾ ಆವರಣ ತಲುಪಿತು.</p>.<p>ತ್ರಿವರ್ಣ ಧ್ವಜ ಹಿಡಿದು ದ್ವಿಚಕ್ರ ವಾಹನ ಏರಿದ ಬಿಜೆಪಿ ಕಾರ್ಯಕರ್ತರು ದೇಶಭಕ್ತಿ ಮೂಡಿಸುವ ಘೋಷಣೆ ಕೂಗಿದರು. ಸಾವಿರಕ್ಕೂ ಅಧಿಕ ಬೈಕ್ ಗಳು ಜಾಥಾದಲ್ಲಿದ್ದವು.</p>.<p>ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುರೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ ಸೇರಿ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಹರ್ ಘರ್ ತಿರಂಗ ಅಭಿಯಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬಿಜೆಪಿ ವತಿಯಿಂದ ನಗರದಲ್ಲಿ ಗುರುವಾರ ದ್ವಿಚಕ್ರ ವಾಹನ ಜಾಥಾ ನಡೆಸಲಾಯಿತು.</p>.<p>ಚಂದ್ರವಳ್ಳಿಯಿಂದ ಆರಂಭವಾದ ಜಾಥಾ ಕನಕವೃತ್ತ, ಹೊಳಲ್ಕೆರೆ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿ ವೃತ್ತ, ಬಿ.ಡಿ.ರಸ್ತೆ, ಕೆಳಗೋಟೆ ಮಾರ್ಗವಾಗಿ ಹಳೆ ಮಾಧ್ಯಮಿಕ ಶಾಲಾ ಆವರಣ ತಲುಪಿತು.</p>.<p>ತ್ರಿವರ್ಣ ಧ್ವಜ ಹಿಡಿದು ದ್ವಿಚಕ್ರ ವಾಹನ ಏರಿದ ಬಿಜೆಪಿ ಕಾರ್ಯಕರ್ತರು ದೇಶಭಕ್ತಿ ಮೂಡಿಸುವ ಘೋಷಣೆ ಕೂಗಿದರು. ಸಾವಿರಕ್ಕೂ ಅಧಿಕ ಬೈಕ್ ಗಳು ಜಾಥಾದಲ್ಲಿದ್ದವು.</p>.<p>ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುರೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ ಸೇರಿ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>