ಇತ್ತೀಚಿನ ದಿನಗಳಲ್ಲಿ ರೈತರ ಮನೆಗಳಲ್ಲಿ ಬೇಸಾಯಕ್ಕೆ ಅಗತ್ಯವಾದ ಎತ್ತುಗಳನ್ನು ಸಾಕುವುದನ್ನೇ ರೈತರು ಕೈಬಿಟ್ಟದ್ದಾರೆ. ಹೀಗಾಗಿ ಸಾಂಪ್ರದಾಯಿಕ ಕಣ ಸುಗ್ಗಿ ಕಣ್ಮರೆಯಾಗುತ್ತದೆ. ರಸ್ತೆಗಳ ಮೇಲೆ ಹುಲ್ಲನ್ನು ಹಾಕಿ ಕಣ ಸುಗ್ಗಿ ಮಾಡುವವರೇ ಜಾಸ್ತಿಯಾಗಿದ್ದಾರೆ ಎನ್ನುತ್ತಾರೆ ದೊಡ್ಡಗೊಲ್ಲರಹಟ್ಟಿಯ ಮರಿಯಪ್ಪ, ಕರಿಯಣ್ಣ.