<p><strong>ಧರ್ಮಪುರ</strong>: ಭಾನುವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಹೋಬಳಿಯಲ್ಲಿ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. </p>.<p>ಅರಳೀಕೆರೆ, ಶ್ರವಣಗೆರೆ, ಹಲಗಲದ್ದಿ, ಹೊಸಕೆರೆ, ಹರಿಯಬ್ಬೆ, ಚಿಲ್ಲಹಳ್ಳಿ, ವೇಣುಕಲ್ಲುಗುಡ್ಡ, ಸೂಗೂರು ಸಕ್ಕರ, ಬ್ಯಾಡರಹಳ್ಳಿ, ದೇವರಕೊಟ್ಟ, ಕಂಬತ್ತನಹಳ್ಳಿ ಮೊದಲಾದ ಭಾಗಗಳಲ್ಲಿ ಭಾನುವಾರ ತಡರಾತ್ರಿ ಉತ್ತಮ ಮಳೆ ಸುರಿದಿದೆ. ಚೆಕ್ ಡ್ಯಾಂ, ಗೋಕಟ್ಟೆಗಳು ತುಂಬಿಕೊಂಡಿವೆ. </p>.<p>ಜಲಾವೃತ: ಕಳೆದ ನಾಲ್ಕೈದು ತಿಂಗಳಿನಿಂದ ಮಳೆ ಬಾರದೆ ರೈತರು ಕಂಗಾಲಾಗಿದ್ದರು. ಮಳೆ ಇಲ್ಲದೆ ಇದ್ದುದ್ದರಿಂದ ಹೋಬಳಿಯಲ್ಲಿ ಶೇಂಗಾ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿತ್ತು. ರೈತರು ಚಿಂತಾಕ್ರಾಂತರಾಗಿದ್ದರು. ಕೊಳವೆ ಬಾವಿಗಳನ್ನು ಹೊಂದಿದ್ದ ರೈತರು ಈರುಳ್ಳಿ, ಟೊಮೆಟೊ ಮತ್ತು ದಾಳಿಂಬೆ ಬೆಳೆಗೆ ಮಾರು ಹೋಗಿದ್ದರು. </p>.<p>ಟೊಮೆಟೊ ಮತ್ತು ಈರುಳ್ಳಿ ಫಸಲಿಗೆ ಬಂದಿದ್ದು, ಕೆಲವರು ಈರುಳ್ಳಿ ಕಟಾವು ಮಾಡಿ ಹೊಲದಲ್ಲಿ ಬಿಟ್ಟಿದ್ದರು. ಭಾನುವಾರ ರಾತ್ರಿ ಸುರಿದ ಮಳೆಗೆ ಅರಳೀಕೆರೆ ರಂಗಸ್ವಾಮಿ ಅವರ 5 ಎಕರೆಯಲ್ಲಿ ನಾಟಿ ಮಾಡಿದ್ದ ಈರುಳ್ಳಿ ಬೆಳೆಗೆ ಹಾನಿಯಾಗಿದೆ. ಕೆಲವು ರೈತರ ಹೊಲಗಳಲ್ಲಿ ನೀರು ನಿಂತಿದ್ದು, ಟೊಮೆಟೊ ಬೆಳೆ ಜಲಾವೃತವಾಗಿದೆ. ಅರಳೀಕೆರೆ ಗೊಲ್ಲರಹಟ್ಟಿಯ ರೈತ ಮುದ್ದಣ್ಣನ ಎರಡು ಎಕರೆಯಲ್ಲಿನ ಟೊಮೆಟೊ ಬೆಳೆ ಜಲಾವೃತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ</strong>: ಭಾನುವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಹೋಬಳಿಯಲ್ಲಿ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. </p>.<p>ಅರಳೀಕೆರೆ, ಶ್ರವಣಗೆರೆ, ಹಲಗಲದ್ದಿ, ಹೊಸಕೆರೆ, ಹರಿಯಬ್ಬೆ, ಚಿಲ್ಲಹಳ್ಳಿ, ವೇಣುಕಲ್ಲುಗುಡ್ಡ, ಸೂಗೂರು ಸಕ್ಕರ, ಬ್ಯಾಡರಹಳ್ಳಿ, ದೇವರಕೊಟ್ಟ, ಕಂಬತ್ತನಹಳ್ಳಿ ಮೊದಲಾದ ಭಾಗಗಳಲ್ಲಿ ಭಾನುವಾರ ತಡರಾತ್ರಿ ಉತ್ತಮ ಮಳೆ ಸುರಿದಿದೆ. ಚೆಕ್ ಡ್ಯಾಂ, ಗೋಕಟ್ಟೆಗಳು ತುಂಬಿಕೊಂಡಿವೆ. </p>.<p>ಜಲಾವೃತ: ಕಳೆದ ನಾಲ್ಕೈದು ತಿಂಗಳಿನಿಂದ ಮಳೆ ಬಾರದೆ ರೈತರು ಕಂಗಾಲಾಗಿದ್ದರು. ಮಳೆ ಇಲ್ಲದೆ ಇದ್ದುದ್ದರಿಂದ ಹೋಬಳಿಯಲ್ಲಿ ಶೇಂಗಾ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿತ್ತು. ರೈತರು ಚಿಂತಾಕ್ರಾಂತರಾಗಿದ್ದರು. ಕೊಳವೆ ಬಾವಿಗಳನ್ನು ಹೊಂದಿದ್ದ ರೈತರು ಈರುಳ್ಳಿ, ಟೊಮೆಟೊ ಮತ್ತು ದಾಳಿಂಬೆ ಬೆಳೆಗೆ ಮಾರು ಹೋಗಿದ್ದರು. </p>.<p>ಟೊಮೆಟೊ ಮತ್ತು ಈರುಳ್ಳಿ ಫಸಲಿಗೆ ಬಂದಿದ್ದು, ಕೆಲವರು ಈರುಳ್ಳಿ ಕಟಾವು ಮಾಡಿ ಹೊಲದಲ್ಲಿ ಬಿಟ್ಟಿದ್ದರು. ಭಾನುವಾರ ರಾತ್ರಿ ಸುರಿದ ಮಳೆಗೆ ಅರಳೀಕೆರೆ ರಂಗಸ್ವಾಮಿ ಅವರ 5 ಎಕರೆಯಲ್ಲಿ ನಾಟಿ ಮಾಡಿದ್ದ ಈರುಳ್ಳಿ ಬೆಳೆಗೆ ಹಾನಿಯಾಗಿದೆ. ಕೆಲವು ರೈತರ ಹೊಲಗಳಲ್ಲಿ ನೀರು ನಿಂತಿದ್ದು, ಟೊಮೆಟೊ ಬೆಳೆ ಜಲಾವೃತವಾಗಿದೆ. ಅರಳೀಕೆರೆ ಗೊಲ್ಲರಹಟ್ಟಿಯ ರೈತ ಮುದ್ದಣ್ಣನ ಎರಡು ಎಕರೆಯಲ್ಲಿನ ಟೊಮೆಟೊ ಬೆಳೆ ಜಲಾವೃತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>