‘ಕಾಳಜಿ ಕೇಂದ್ರದಲ್ಲಿ ಬೆಳಿಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಉತ್ತಮ ಮತ್ತು ರುಚಿಯಾದ ಊಟ ಸಿಗುತ್ತಿದೆ. ಮೂಲ ಸೌಕರ್ಯಗಳನ್ನೂ ಕಲ್ಪಿಸಲಾಗಿದೆ. ಆದರೆ, ಎಲ್ಲಿಯೂ ಓಡಾಡುವಂತಿಲ್ಲ. ದುಡಿಮೆ ಬಿಟ್ಟು ಇಲ್ಲಿ ಕೂರುವಂತಾಗಿರುವುದಕ್ಕೆ ತುಂಬಾ ಬೇಸರವಾಗುತ್ತಿದೆ. ಸದ್ಯ ಕೇಂದ್ರದಲ್ಲಿ ತಾತ್ಕಾಲಿಕವಾಗಿ ಊಟ ಸಿಗುತ್ತಿದೆ. ಜಮೀನುಗಳು ಮುಳುಗಡೆಯಾಗಿದ್ದು, ಮುಂದೆ ಜೀವನಕ್ಕೆ ಏನು ಮಾಡುವುದು ಎಂಬ ಚಿಂತೆ ಕಾಡುತ್ತಿದೆ’ ಎಂದು ಕೆ.ಟಿ. ನಗರ ನಿವಾಸಿಗಳು ಬೇಸರ ವ್ಯಕ್ತಪಡಿಸಿದರು.