ಎರಡು ದಿನಗಳಿದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿರಾ ತಾಲ್ಲೂಕು ಮತ್ತು ಧರ್ಮಪುರ ಹೋಬಳಿಯಲ್ಲಿ ಮಳೆಯಾಗಿದ್ದರಿಂದ ಹೂವಿನಹೊಳೆ ಬಳಿ ನಿರ್ಮಾಣಗೊಂಡಿರುವ ಚೆಕ್ ಡ್ಯಾಂ ತುಂಬಿಸುವರ್ಣಮುಖಿ ನದಿ ಮೈತುಂಬಿ ಹರಿಯುತ್ತಿದೆ.
ಮೂವತ್ತು ವರ್ಷಗಳಿಂದಲೂ ಈ ಭಾಗದಲ್ಲಿ ಉತ್ತಮ ಮಳೆಯೇ ಆಗಿರಲಿಲ್ಲ. ಇದರಿಂದ ಬೇಸತ್ತಿದ್ದ ಜನರು ದೂರದ ನಗರಗಳಿಗೆ ವಲಸೆ ಹೋಗಿದ್ದಾರೆ. ವೇದಾವತಿ ನದಿಯಲ್ಲಿ ನೀರು ಸಂಗ್ರಹ ಆಗಿರುವುದರಿಂದ ಹೋಬಳಿಯ ರೈತರ ಜಮೀನುಗಳಲ್ಲಿನ ಕೊಳವೆ ಬಾವಿಗಳಲ್ಲಿ ಅಂತರ್ಜಲ ಹೆಚ್ಚಾಗಿದೆ. ಕೃಷಿ ಚಟುವಟಿಕೆ ಗರಿಗೆದರಲಿದೆ.
ವೇದಾವತಿ ನದಿಗೆ ಕೂನಿಕೆರೆಯಿಂದ ಬೊಂಬೇರಹಳ್ಳಿಯವರೆಗೆ ಒಟ್ಟು 14 ಚೆಕ್ ಡ್ಯಾಂ ಮತ್ತು ಬ್ಯಾರೇಜ್ ನಿರ್ಮಾಣವಾಗಿರುವುದರಿಂದ ಸಾಕಷ್ಟು ನೀರು ಸಂಗ್ರಹಗೊಂಡಿದ್ದು, 20 ಕಿ.ಮೀಯಿಂದ 30 ಕಿ.ಮೀ.ಯವರೆಗೆಅಂತರ್ಜಲ ಹೆಚ್ಚಿದೆ ಎಂದು ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಜಿ. ಭೀಮರಾಜ್ ತಿಳಿಸಿದ್ದಾರೆ.