ನಿರಂತರವಾಗಿ ಸುರಿದ ಮಳೆಗೆ ನಾಯಕನಹಟ್ಟಿಯ ಅಂಬೇಡ್ಕರ್ ಕಾಲೊನಿಯ ಕಂಪ್ಲೇಶಪ್ಪ ಅವರ ಮನೆಯ ಗೋಡೆ ಕುಸಿದಿದೆ. ಮನೆಯಲ್ಲಿ ಮಲಗಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುತ್ರ ಅರುಣ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಡೆ ಕುಸಿದ ಸದ್ದು ಕೇಳಿ ಸ್ಥಳೀಯರು ತಕ್ಷಣ ನೆರವಿಗೆ ತೆರಳಿದರು. ಮಣ್ಣು ತೆಗೆದು ಪ್ರಾಣ ಉಳಿಸಲು ಪ್ರಯತ್ನಿಸಿದರು.