ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮೈದುಂಬಿ ಹರಿಯುತ್ತಿದೆ ಸುವರ್ಣಮುಖಿ ನದಿ

Last Updated 19 ಮೇ 2022, 5:01 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜಲಮೂಲಗಳಿಗೆ ಅಪಾರ ಪ್ರಮಾಣದ ನೀರು ಹರಿದುಬಂದಿದೆ. ಹಿರಿಯೂರು ತಾಲ್ಲೂಕಿನ ಸುವರ್ಣಮುಖಿ ನದಿ ಮೈದುಂಬಿ ಹರಿಯುತ್ತಿದೆ.

ಹಿರಿಯೂರು ತಾಲ್ಲೂಕಿನ ಹೂವಿನಹೊಳೆ ಗ್ರಾಮದಲ್ಲಿ ಸುವರ್ಣಮುಖಿ ನದಿ ಬೋರ್ಗರೆಯುತ್ತಿದೆ. ಮುಂಗಾರಿಗೂ ಮುನ್ನವೇ ಬ್ಯಾರೇಜ್, ಚೆಕ್ ಡ್ಯಾಂ ಭರ್ತಿಯಾಗಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ. ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಮೀಪದ ಸೀಗೆಹಳ್ಳಿ-ಅಳಗವಾಡಿ ಹಳ್ಳ ತುಂಬಿ ಹರಿದಿದೆ.

ಬುಧವಾರ ತಡರಾತ್ರಿ ಆರಂಭವಾದ ಮಳೆ ನಸುಕಿನವರೆಗೂ ಸುರಿದಿದೆ. ಮೊಳಕಾಲ್ಮುರು, ಚಳ್ಳಕೆರೆ, ಹಿರಿಯೂರು ತಾಲ್ಲೂಕಿನ ಕೆರೆ, ಕಟ್ಟೆ, ಜಲಮೂಲಗಳು ಭರ್ತಿಯಾಗಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಹರ್ಷಗೊಂಡಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಪಿಳ್ಳೆಕೇರನಹಳ್ಳಿಯ ಸರ್ಕಾರಿ ಶಾಲೆ ಆವರಣ ಜಲಾವೃತಗೊಂಡಿದೆ. ಮಲ್ಲಾಪುರ ಕೆರೆಯ ನೀರು ಶಾಲೆಗೆ ನುಗ್ಗಿದ್ದು, ಆವರಣದಲ್ಲಿರುವ ಎರಡು ಮರಗಳು ನೆಲಕ್ಕುರುಳಿರುಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT