ಬೆಂಗಳೂರು: ‘ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ಧ ಪ್ರತಿ ದೂರು ದಾಖಲಿಸಿರುವುದರಿಂದ ಶರಣರ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆ ದಿಕ್ಕು ತಪ್ಪಲಿದೆಯಲ್ಲವೇ’ ಎಂದು ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ‘ಶರಣರ ವಿರುದ್ಧದ ಪ್ರಕರಣ ಸೆಷನ್ಸ್ ಕೋರ್ಟ್ನಲ್ಲಿ ವಿಚಾರಣೆ ಹಂತ ತಲುಪಿದ್ದು ಸತ್ಯ ಹೊರಬರಲಿ ಬಿಡಿ’ ಎಂದು ಸರ್ಕಾರದ ಕಿವಿ ಹಿಂಡಿದೆ.