<p><strong>ಚಳ್ಳಕೆರೆ:</strong> ಉತ್ತಮ ಗುಣಮಟ್ಟ ಹೊಂದಿರುವ ನಂದಿನಿ ಹಾಲಿನ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇದ್ದು, ಹಸು ಸಾಕಾಣಿಕೆಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಹೈನುಗಾರಿಕೋದ್ಯಮವನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ಶಿಮೂಲ್ ಹಾಲು ಒಕ್ಕೂಟದ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ಹೇಳಿದರು.</p>.<p>ನಗರದ ನಂದಿನಿ ಉಪ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಂದಿನಿ ಹಾಲು ಉತ್ಪನ್ನಗಳ ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು. </p>.<p>ಬಯಲುಸೀಮೆ ಪ್ರದೇಶದಲ್ಲಿ ನೂರಾರು ಕುಟುಂಬಗಳು ಹಸು ಸಾಕಾಣಿಕೆ ಮೂಲಕ ಜೀವನ ನಡೆಸುತ್ತಿದ್ದು, ಮಕ್ಕಳ ಶಿಕ್ಷಣಕ್ಕೂ ಸಹಕಾರಿಯಾಗಿದೆ. ಮನೆ ಮನೆಗೆ ತೆರಳಿ ನಂದಿನಿ ಉತ್ಪನ್ನಗಳ ಪರಿಚಯ ಮಾಡಿಕೊಡುವ ಜತೆಗೆ ಅವುಗಳನ್ನು ಬಳಕೆ ಮಾಡುವಂತೆ ಜನರಿಗೆ ತಿಳಿವಳಿಕೆ ನೀಡಬೇಕು ಎಂದು ಮಾರಾಟಗಾರರಿಗೆ ಸಲಹೆ ನೀಡಿದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳ ವಿದ್ಯಾಭ್ಯಾಸಕ್ಕೆ ಶಿಮೂಲ್ ವತಿಯಿಂದ ಆರ್ಥಿಕ ನೆರವು ನೀಡಲಾಗುವುದು ಎಂದು ನಂದಿನಿ ಉತ್ಪನ್ನಗಳ ಮಾರ್ಕೆಟಿಂಗ್ ಅಧಿಕಾರಿ ಇರ್ಫಾನ್ ತನ್ವಿ ಹೇಳಿದರು. </p>.<p>ಇದೇ ವೇಳೆ ಹಾಲು ಉತ್ಪಾದಕರು ಹಾಗೂ ಮಾರಾಟಗಾರರಿಗೆ ಶಿವಮೊಗ್ಗ ಹಾಲು ಒಕ್ಕೂಟದಿಂದ ಕ್ಯಾರಿ ಬ್ಯಾಗ್, ರೈನ್ಕೋಟ್, ಜರ್ಕಿನ್, ಟಿ.ಶರ್ಟ್ ವಿತರಿಸಲಾಯಿತು.</p>.<p>ಕಚೇರಿ ಸಿಬ್ಬಂದಿ ಅಭಿಷೇಕ್, ಗೋವಿಂದರಾಜು, ದಿವಾಕರ್, ದಯಾನಂದ್, ಸುಶೀಲಾ, ಆನಂದ್, ಗೀತಾ, ಬೋರಣ್ಣ, ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ಉತ್ತಮ ಗುಣಮಟ್ಟ ಹೊಂದಿರುವ ನಂದಿನಿ ಹಾಲಿನ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇದ್ದು, ಹಸು ಸಾಕಾಣಿಕೆಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಹೈನುಗಾರಿಕೋದ್ಯಮವನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ಶಿಮೂಲ್ ಹಾಲು ಒಕ್ಕೂಟದ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ಹೇಳಿದರು.</p>.<p>ನಗರದ ನಂದಿನಿ ಉಪ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಂದಿನಿ ಹಾಲು ಉತ್ಪನ್ನಗಳ ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು. </p>.<p>ಬಯಲುಸೀಮೆ ಪ್ರದೇಶದಲ್ಲಿ ನೂರಾರು ಕುಟುಂಬಗಳು ಹಸು ಸಾಕಾಣಿಕೆ ಮೂಲಕ ಜೀವನ ನಡೆಸುತ್ತಿದ್ದು, ಮಕ್ಕಳ ಶಿಕ್ಷಣಕ್ಕೂ ಸಹಕಾರಿಯಾಗಿದೆ. ಮನೆ ಮನೆಗೆ ತೆರಳಿ ನಂದಿನಿ ಉತ್ಪನ್ನಗಳ ಪರಿಚಯ ಮಾಡಿಕೊಡುವ ಜತೆಗೆ ಅವುಗಳನ್ನು ಬಳಕೆ ಮಾಡುವಂತೆ ಜನರಿಗೆ ತಿಳಿವಳಿಕೆ ನೀಡಬೇಕು ಎಂದು ಮಾರಾಟಗಾರರಿಗೆ ಸಲಹೆ ನೀಡಿದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳ ವಿದ್ಯಾಭ್ಯಾಸಕ್ಕೆ ಶಿಮೂಲ್ ವತಿಯಿಂದ ಆರ್ಥಿಕ ನೆರವು ನೀಡಲಾಗುವುದು ಎಂದು ನಂದಿನಿ ಉತ್ಪನ್ನಗಳ ಮಾರ್ಕೆಟಿಂಗ್ ಅಧಿಕಾರಿ ಇರ್ಫಾನ್ ತನ್ವಿ ಹೇಳಿದರು. </p>.<p>ಇದೇ ವೇಳೆ ಹಾಲು ಉತ್ಪಾದಕರು ಹಾಗೂ ಮಾರಾಟಗಾರರಿಗೆ ಶಿವಮೊಗ್ಗ ಹಾಲು ಒಕ್ಕೂಟದಿಂದ ಕ್ಯಾರಿ ಬ್ಯಾಗ್, ರೈನ್ಕೋಟ್, ಜರ್ಕಿನ್, ಟಿ.ಶರ್ಟ್ ವಿತರಿಸಲಾಯಿತು.</p>.<p>ಕಚೇರಿ ಸಿಬ್ಬಂದಿ ಅಭಿಷೇಕ್, ಗೋವಿಂದರಾಜು, ದಿವಾಕರ್, ದಯಾನಂದ್, ಸುಶೀಲಾ, ಆನಂದ್, ಗೀತಾ, ಬೋರಣ್ಣ, ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>