<p><strong>ಚಿತ್ರದುರ್ಗ: </strong>ಇಲ್ಲಿನ ಬಿ.ಡಿ.ರಸ್ತೆಯ ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗದಲ್ಲಿ ಪ್ರತಿಷ್ಠಾಪಿಸುತ್ತಿರುವ ಹಿಂದೂ ಮಹಾಗಣಪತಿ ಗುರುವಾರ ಪುರ ಪ್ರವೇಶಿಸಿತು. ಬಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಗಣೇಶಮೂರ್ತಿಯನ್ನು ಸ್ವಾಗತಿಸಿದರು.</p>.<p>ನಗರದ ಹೊರವಲಯದ ಮಾದಾರ ಚನ್ನಯ್ಯ ಗುರುಪೀಠಕ್ಕೆ ಬಂದ ಗಣೇಶಮೂರ್ತಿಗೆ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಪೂಜೆ ಸಲ್ಲಿಸಿದರು. ತ್ರಿಶೂಲ ಹಿಡಿದಿರುವ ಗಣೇಶಮೂರ್ತಿ ಸುಮಾರು ಎಂಟು ಅಡಿಗೂ ಹೆಚ್ಚು ಎತ್ತರವಿದೆ. ಸರ್ಕಾರ ನಿಗದಿಪಡಿಸಿದ ಮಾನದಂಡ ಉಲ್ಲಂಘನೆಯಾಗಿದೆ.</p>.<p>ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಬದರಿನಾಥ್, ಬಿಜೆಪಿ ಮುಖಂಡ ಜಿ.ಎಸ್.ಅನಿತ್, ಮಾದಾರ ಚನ್ನಯ್ಯ ಗುರುಪೀಠದ ಆಡಳಿತಾಧಿಕಾರಿ ಅನಿಲ್ಕುಮಾರ್, ಬಿಜೆಪಿ ವಿಭಾಗೀಯ ಪ್ರಭಾರಿ ಜಿ.ಎಂ. ಸುರೇಶ್ ಇದ್ದರು. ಗಣೇಶನ ಭಕ್ತರು ಜಯಘೋಷ ಮೊಳಗಿಸಿದರು.</p>.<p>ಅಲ್ಲಿಂದ ನೇರವಾಗಿ ಪ್ರತಿಷ್ಠಾಪಿಸಲು ಉದ್ದೇಶಿಸಿದ ಸ್ಥಳಕ್ಕೆ ತರಲಾಯಿತು. ರಸ್ತೆ ಬದಿಯದ್ದ ಜನರು ಮೂರ್ತಿಯನ್ನು ಕಂಡು ಭಕ್ತಿಪೂರ್ವಕವಾಗಿ ನಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಇಲ್ಲಿನ ಬಿ.ಡಿ.ರಸ್ತೆಯ ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗದಲ್ಲಿ ಪ್ರತಿಷ್ಠಾಪಿಸುತ್ತಿರುವ ಹಿಂದೂ ಮಹಾಗಣಪತಿ ಗುರುವಾರ ಪುರ ಪ್ರವೇಶಿಸಿತು. ಬಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಗಣೇಶಮೂರ್ತಿಯನ್ನು ಸ್ವಾಗತಿಸಿದರು.</p>.<p>ನಗರದ ಹೊರವಲಯದ ಮಾದಾರ ಚನ್ನಯ್ಯ ಗುರುಪೀಠಕ್ಕೆ ಬಂದ ಗಣೇಶಮೂರ್ತಿಗೆ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಪೂಜೆ ಸಲ್ಲಿಸಿದರು. ತ್ರಿಶೂಲ ಹಿಡಿದಿರುವ ಗಣೇಶಮೂರ್ತಿ ಸುಮಾರು ಎಂಟು ಅಡಿಗೂ ಹೆಚ್ಚು ಎತ್ತರವಿದೆ. ಸರ್ಕಾರ ನಿಗದಿಪಡಿಸಿದ ಮಾನದಂಡ ಉಲ್ಲಂಘನೆಯಾಗಿದೆ.</p>.<p>ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಬದರಿನಾಥ್, ಬಿಜೆಪಿ ಮುಖಂಡ ಜಿ.ಎಸ್.ಅನಿತ್, ಮಾದಾರ ಚನ್ನಯ್ಯ ಗುರುಪೀಠದ ಆಡಳಿತಾಧಿಕಾರಿ ಅನಿಲ್ಕುಮಾರ್, ಬಿಜೆಪಿ ವಿಭಾಗೀಯ ಪ್ರಭಾರಿ ಜಿ.ಎಂ. ಸುರೇಶ್ ಇದ್ದರು. ಗಣೇಶನ ಭಕ್ತರು ಜಯಘೋಷ ಮೊಳಗಿಸಿದರು.</p>.<p>ಅಲ್ಲಿಂದ ನೇರವಾಗಿ ಪ್ರತಿಷ್ಠಾಪಿಸಲು ಉದ್ದೇಶಿಸಿದ ಸ್ಥಳಕ್ಕೆ ತರಲಾಯಿತು. ರಸ್ತೆ ಬದಿಯದ್ದ ಜನರು ಮೂರ್ತಿಯನ್ನು ಕಂಡು ಭಕ್ತಿಪೂರ್ವಕವಾಗಿ ನಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>