<p><strong>ಸಿರಿಗೆರೆ</strong>: ಹೋಬಳಿ ಕೇಂದ್ರವಾದ ಭರಮಸಾಗರದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಅದ್ದೂರಿಯಿಂದ ನಡೆಯಿತು. ಹೆಚ್ಚಿನ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. </p>.<p>ಇಲ್ಲಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಸಾಗಿತು. ಯುವಜನತೆ ಕುಣಿದು ಕುಪ್ಪಳಿಸಿತು. ಪೊಲೀಸರು ಕಟ್ಟುನಿಟ್ಟಿನ ಆದೇಶ ಮಾಡಿದ್ದರಿಂದ ಈ ಬಾರಿ ಡಿ.ಜೆ. ಬಳಸಲಿಲ್ಲ. ಭವ್ಯವಾದ ಗಣಪತಿ ಮೂರ್ತಿಯನ್ನು ಅಲಂಕೃತ ಟ್ರ್ಯಾಕ್ಟರ್ನಲ್ಲಿ ಕುಳ್ಳಿರಿಸಲಾಗಿತ್ತು. ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. </p>.<p>‘ಹಿಂದೂ ವಿರೋಧಿ ಷಡ್ಯಂತ್ರ’: ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ‘ರಾಜ್ಯ ಸರ್ಕಾರವು ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿ ಹಿಂದೂಗಳ ಧಾರ್ಮಿಕ ಹಕ್ಕುಗಳನ್ನು ಕಸಿಯುತ್ತಿದೆ. ಇಂತಹ ತಂತ್ರ ಬಹಳ ಕಾಲ ನಡೆಯುವುದಿಲ್ಲ. ಈ ಸರ್ಕಾರವೇ ಖಾಯಂ ಆಗಿ ಅಧಿಕಾರದಲ್ಲಿ ಇರುವುದಿಲ್ಲ. ಇವರ ಅಧಿಕಾರ ಮುಗಿದ ನಂತರ ಭರಮಸಾಗರದಲ್ಲಿಯೇ ಅದ್ದೂರಿ ಯಾತ್ರೆಯನ್ನು ಹಿಂದೂ ಸಂಘಟನೆಗಳಿಂದ ಮಾಡಲಾಗುತ್ತದೆ’ ಎಂದರು. </p>.<p>ಪುನೀತ್ ಕೆರೆಹಳ್ಳಿ ಮಾತನಾಡುತ್ತಿದ್ದಾಗ ಮೈಕ್ ಕೈಕೊಟ್ಟಿತು. ಇದರಿಂದ ಕೆರಳಿದ ಅವರು, ‘ಇಂತಹ ತಂತ್ರಗಳಿಗೆ ನಾವು ವಿಚಲಿತರಾಗುವುದಿಲ್ಲ. ಇದಕ್ಕೆಲ್ಲಾ ಉತ್ತರ ಕೊಡುವ ಕಾಲ ಬರುತ್ತದೆ. ಭರಮಸಾಗರದಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಯುತ್ತಿದ್ದರೂ, ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ’ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ</strong>: ಹೋಬಳಿ ಕೇಂದ್ರವಾದ ಭರಮಸಾಗರದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಅದ್ದೂರಿಯಿಂದ ನಡೆಯಿತು. ಹೆಚ್ಚಿನ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. </p>.<p>ಇಲ್ಲಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಸಾಗಿತು. ಯುವಜನತೆ ಕುಣಿದು ಕುಪ್ಪಳಿಸಿತು. ಪೊಲೀಸರು ಕಟ್ಟುನಿಟ್ಟಿನ ಆದೇಶ ಮಾಡಿದ್ದರಿಂದ ಈ ಬಾರಿ ಡಿ.ಜೆ. ಬಳಸಲಿಲ್ಲ. ಭವ್ಯವಾದ ಗಣಪತಿ ಮೂರ್ತಿಯನ್ನು ಅಲಂಕೃತ ಟ್ರ್ಯಾಕ್ಟರ್ನಲ್ಲಿ ಕುಳ್ಳಿರಿಸಲಾಗಿತ್ತು. ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. </p>.<p>‘ಹಿಂದೂ ವಿರೋಧಿ ಷಡ್ಯಂತ್ರ’: ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ‘ರಾಜ್ಯ ಸರ್ಕಾರವು ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿ ಹಿಂದೂಗಳ ಧಾರ್ಮಿಕ ಹಕ್ಕುಗಳನ್ನು ಕಸಿಯುತ್ತಿದೆ. ಇಂತಹ ತಂತ್ರ ಬಹಳ ಕಾಲ ನಡೆಯುವುದಿಲ್ಲ. ಈ ಸರ್ಕಾರವೇ ಖಾಯಂ ಆಗಿ ಅಧಿಕಾರದಲ್ಲಿ ಇರುವುದಿಲ್ಲ. ಇವರ ಅಧಿಕಾರ ಮುಗಿದ ನಂತರ ಭರಮಸಾಗರದಲ್ಲಿಯೇ ಅದ್ದೂರಿ ಯಾತ್ರೆಯನ್ನು ಹಿಂದೂ ಸಂಘಟನೆಗಳಿಂದ ಮಾಡಲಾಗುತ್ತದೆ’ ಎಂದರು. </p>.<p>ಪುನೀತ್ ಕೆರೆಹಳ್ಳಿ ಮಾತನಾಡುತ್ತಿದ್ದಾಗ ಮೈಕ್ ಕೈಕೊಟ್ಟಿತು. ಇದರಿಂದ ಕೆರಳಿದ ಅವರು, ‘ಇಂತಹ ತಂತ್ರಗಳಿಗೆ ನಾವು ವಿಚಲಿತರಾಗುವುದಿಲ್ಲ. ಇದಕ್ಕೆಲ್ಲಾ ಉತ್ತರ ಕೊಡುವ ಕಾಲ ಬರುತ್ತದೆ. ಭರಮಸಾಗರದಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಯುತ್ತಿದ್ದರೂ, ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ’ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>