<p><strong>ಸಿರಿಗೆರೆ: </strong>ಜಗತ್ತಿನ ಎಷ್ಟೇ ಭಾಷೆಗಳನ್ನು ಕಲಿತರೂ ಮಾತೃಭಾಷೆಯನ್ನು ಶುದ್ಧವಾಗಿ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಇಲ್ಲಿನ ಗುರುಶಾಂತೇಶ್ವರ ದಾಸೋಹ ಭವನದಲ್ಲಿ ತರಳಬಾಳು ಬೃಹನ್ಮಠ ಹಾಗೂ ತರಳಬಾಳು ಕಲಾಸಂಘದಿಂದ ಶನಿವಾರ ನಡೆದ ಕರ್ನಾಟಕ ರಾಜ್ಯೋತ್ಸವ-2022ರ ಮೊದಲ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಪಠ್ಯ ಪುಸ್ತಕಗಳು ಕೇವಲ ದಿಗ್ದರ್ಶಕಗಳು ಮಾತ್ರ. ಸಾಹಿತ್ಯ ಕೃತಿಗಳ ಅಧ್ಯಯನದಿಂದ ಭಾಷಾ ಪ್ರೌಢಿಮೆ ಬೆಳೆಯುತ್ತದೆ. ಪ್ರತಿಯೊಂದು ಭಾಷೆಗೂ ಆಡು ಭಾಷಾ ಸೊಗಡಿರುತ್ತದೆ. ಆ ಸೊಗಡನ್ನು ಅನುಭವಿಸಿ, ಆನಂದಿಸುವಂತಾಗಲು ಈ ರಾಜ್ಯೋತ್ಸವ ಪ್ರೇರಣೆಯಾಗಲಿ ಎಂದರು.</p>.<p>ಈ ನೆಲದಲ್ಲಿರುವ ನಾಗರಿಕತೆ, ಸಂಸ್ಕೃತಿ, ಮೌಲ್ಯಗಳಿಂದ ಭಾರತ ವಿಶ್ವಗುರುವಾಗಿ ಬೆಳೆಯಲು ಕಾರಣವಾಗಿದೆ. ಭಾರತೀಯ ತತ್ತ್ವ ಚಿಂತನೆಗಳಲ್ಲಿ ವಿಶ್ವಮಾನವ ಪ್ರಜ್ಞೆ ಅಡಗಿದೆ ಎಂದು ಕರ್ನಾಟಕದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಂ. ಮದನಗೋಪಾಲ್ ಅಭಿಪ್ರಾಯಪಟ್ಟರು.</p>.<p>ಕನ್ನಡ ನಾಡಿನ ಹಳ್ಳಿಗಳಲ್ಲಿ ಕನ್ನಡ ಭಾಷೆಯು ಜೀವಂತವಾಗಿದೆ. ಆಡುಭಾಷೆ ಸೊಗಡಿನಲ್ಲಿರುವ ಒಗಟು, ಗಾದೆಗಳು, ಚುಟುಕುಗಳಲ್ಲಿ ಕನ್ನಡದ ಸತ್ವ ಅಡಗಿದೆ ಎಂದು ವಾಗ್ಮಿ ಹಿರೇಮಗಳೂರು ಕಣ್ಣನ್ ಹೇಳಿದರು.</p>.<p>ಡಾ. ಬಿ.ವಿ. ವಸಂತಕುಮಾರ್ ಮಾತನಾಡಿದರು.</p>.<p>ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ನಟ ಎಚ್.ಜಿ. ದತ್ತಾತ್ರೇಯ ಅವರನ್ನು ಸನ್ಮಾನಿಸಲಾಯಿತು. ಕನ್ನಡದಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.</p>.<p>ಹಾಸನದ ಬನುಮ ಗುರುದತ್ತ ಮತ್ತು ಸಂಗಡಿಗರಿಂದ ಸುಗಮ ಸಂಗೀತ ಹಾಗೂ ಸಾಂಸ್ಕೃತಿಕ<br />ಸ್ಪರ್ಧೆಗಳಲ್ಲಿ ವಿಜೇತರಾದ ತರಳಬಾಳು ವಿದ್ಯಾಸಂಸ್ಥೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು.</p>.<p>ತರಳಬಾಳು ಕಲಾಸಂಘ ಜಾನಪದ ಸಿರಿಸಂಭ್ರಮ ವಿದ್ಯಾರ್ಥಿಗಳು ಮಲ್ಲಕಂಬ ಪ್ರದರ್ಶನ ನೀಡಿದರು.</p>.<p>ನಾಗರಾಜ ಸಿರಿಗೆರೆ, ರಂಗಣ್ಣ, ವಿಶ್ವಕುಮಾರ್, ವೀರಣ್ಣ ಎಸ್. ಜತ್ತಿ, ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ, ಅಣ್ಣನ ಬಳಗದವರು, ಶಾಲಾ-ಕಾಲೇಜುಗಳ ಮುಖ್ಯಸ್ಥರು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ: </strong>ಜಗತ್ತಿನ ಎಷ್ಟೇ ಭಾಷೆಗಳನ್ನು ಕಲಿತರೂ ಮಾತೃಭಾಷೆಯನ್ನು ಶುದ್ಧವಾಗಿ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಇಲ್ಲಿನ ಗುರುಶಾಂತೇಶ್ವರ ದಾಸೋಹ ಭವನದಲ್ಲಿ ತರಳಬಾಳು ಬೃಹನ್ಮಠ ಹಾಗೂ ತರಳಬಾಳು ಕಲಾಸಂಘದಿಂದ ಶನಿವಾರ ನಡೆದ ಕರ್ನಾಟಕ ರಾಜ್ಯೋತ್ಸವ-2022ರ ಮೊದಲ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಪಠ್ಯ ಪುಸ್ತಕಗಳು ಕೇವಲ ದಿಗ್ದರ್ಶಕಗಳು ಮಾತ್ರ. ಸಾಹಿತ್ಯ ಕೃತಿಗಳ ಅಧ್ಯಯನದಿಂದ ಭಾಷಾ ಪ್ರೌಢಿಮೆ ಬೆಳೆಯುತ್ತದೆ. ಪ್ರತಿಯೊಂದು ಭಾಷೆಗೂ ಆಡು ಭಾಷಾ ಸೊಗಡಿರುತ್ತದೆ. ಆ ಸೊಗಡನ್ನು ಅನುಭವಿಸಿ, ಆನಂದಿಸುವಂತಾಗಲು ಈ ರಾಜ್ಯೋತ್ಸವ ಪ್ರೇರಣೆಯಾಗಲಿ ಎಂದರು.</p>.<p>ಈ ನೆಲದಲ್ಲಿರುವ ನಾಗರಿಕತೆ, ಸಂಸ್ಕೃತಿ, ಮೌಲ್ಯಗಳಿಂದ ಭಾರತ ವಿಶ್ವಗುರುವಾಗಿ ಬೆಳೆಯಲು ಕಾರಣವಾಗಿದೆ. ಭಾರತೀಯ ತತ್ತ್ವ ಚಿಂತನೆಗಳಲ್ಲಿ ವಿಶ್ವಮಾನವ ಪ್ರಜ್ಞೆ ಅಡಗಿದೆ ಎಂದು ಕರ್ನಾಟಕದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಂ. ಮದನಗೋಪಾಲ್ ಅಭಿಪ್ರಾಯಪಟ್ಟರು.</p>.<p>ಕನ್ನಡ ನಾಡಿನ ಹಳ್ಳಿಗಳಲ್ಲಿ ಕನ್ನಡ ಭಾಷೆಯು ಜೀವಂತವಾಗಿದೆ. ಆಡುಭಾಷೆ ಸೊಗಡಿನಲ್ಲಿರುವ ಒಗಟು, ಗಾದೆಗಳು, ಚುಟುಕುಗಳಲ್ಲಿ ಕನ್ನಡದ ಸತ್ವ ಅಡಗಿದೆ ಎಂದು ವಾಗ್ಮಿ ಹಿರೇಮಗಳೂರು ಕಣ್ಣನ್ ಹೇಳಿದರು.</p>.<p>ಡಾ. ಬಿ.ವಿ. ವಸಂತಕುಮಾರ್ ಮಾತನಾಡಿದರು.</p>.<p>ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ನಟ ಎಚ್.ಜಿ. ದತ್ತಾತ್ರೇಯ ಅವರನ್ನು ಸನ್ಮಾನಿಸಲಾಯಿತು. ಕನ್ನಡದಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.</p>.<p>ಹಾಸನದ ಬನುಮ ಗುರುದತ್ತ ಮತ್ತು ಸಂಗಡಿಗರಿಂದ ಸುಗಮ ಸಂಗೀತ ಹಾಗೂ ಸಾಂಸ್ಕೃತಿಕ<br />ಸ್ಪರ್ಧೆಗಳಲ್ಲಿ ವಿಜೇತರಾದ ತರಳಬಾಳು ವಿದ್ಯಾಸಂಸ್ಥೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು.</p>.<p>ತರಳಬಾಳು ಕಲಾಸಂಘ ಜಾನಪದ ಸಿರಿಸಂಭ್ರಮ ವಿದ್ಯಾರ್ಥಿಗಳು ಮಲ್ಲಕಂಬ ಪ್ರದರ್ಶನ ನೀಡಿದರು.</p>.<p>ನಾಗರಾಜ ಸಿರಿಗೆರೆ, ರಂಗಣ್ಣ, ವಿಶ್ವಕುಮಾರ್, ವೀರಣ್ಣ ಎಸ್. ಜತ್ತಿ, ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ, ಅಣ್ಣನ ಬಳಗದವರು, ಶಾಲಾ-ಕಾಲೇಜುಗಳ ಮುಖ್ಯಸ್ಥರು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>