<p><strong>ಹಿರಿಯೂರು:</strong> ಕ್ಷೇತ್ರದಲ್ಲಿ ಶುಕ್ರವಾರ ಲೋಕಸಭೆಗೆ ನಡೆದ ಮತದಾನ ಶಾಂತಿಯುತವಾಗಿತ್ತು. ಬೆಸ್ಕಾಂ ಇಲಾಖೆ ವಸತಿ ಗೃಹದ ಆವರಣದಲ್ಲಿರುವ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ 109 ವರ್ಷದ ತಿಪ್ಪೀರಮ್ಮ ಅವರು ತಮ್ಮ ಮೊಮ್ಮಗ ಪ್ರಮೋದ್ ಜೊತೆ ಹೋಗಿ ಮತ ಚಲಾಯಿಸಿ ಅಚ್ಚರಿ ಮೂಡಿಸಿದರು.</p>.<p>ನಗರದ ವರ್ತಕ ಎಚ್.ಎಸ್.ಅಮರನಾಥ್ ಅವರ ಪುತ್ರ ಎಚ್.ಎ. ಸತ್ಯ ಹುಳಿಯಾರು ರಸ್ತೆಯಲ್ಲಿರುವ ತುಳಸಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಮಾಂಗಲ್ಯ ಧಾರಣೆ ಮುಗಿಸಿಕೊಂಡು ಮತಗಟ್ಟೆ ಸಂಖ್ಯೆ 174ಕ್ಕೆ ಬಂದು ಮತದಾನ ಮಾಡುವ ಮೂಲಕ ಗಮನ ಸೆಳೆದರು.</p>.<p>ತಾಲ್ಲೂಕಿನ ಮ್ಯಾಕ್ಲೂರಹಳ್ಳಿಯ ಬೋವಿ ಕಾಲೊನಿಯಲ್ಲಿ ಶುಕ್ರವಾರ ಬೆಳಿಗ್ಗೆ 20ಕ್ಕೂ ಹೆಚ್ಚು ಮಹಿಳೆಯರು ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ ಮಾಡುವವರೆಗೆ ಮತ ಚಲಾಯಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರು ಮಹಿಳೆಯರ ಮನ ಒಲಿಸಿ ಮತದಾನ ಮಾಡಿಸಿದರು.</p>.<p>ಹಣ ಹಂಚಿಕೆಯಲ್ಲಿ ತಾರತಮ್ಯ: ‘ಪ್ರಮುಖ ರಾಜಕೀಯ ಪಕ್ಷವೊಂದು ನಗರದಲ್ಲಿನ ಮತದಾರರಿಗೆ ತಲಾ ₹ 300 ಹಂಚಿದ್ದು, ಗ್ರಾಮೀಣ ಭಾಗದಲ್ಲಿ ₹ 200 ಕೊಟ್ಟಿದ್ದಾರೆ. ಹಳ್ಳಿಯ ಓಟುಗಳಿಗೆ ಬೆಲೆ ಕಡಿಮೆಯೇ? ಇಂತಹ ತಾರತಮ್ಯ ಸರಿಯಲ್ಲ, ತಕ್ಕ ಪಾಠ ಕಲಿಸುತ್ತೇವೆ’ ಎಂಬ ಮಾತುಗಳು ನಗರಕ್ಕೆ ಹೊಂದಿಕೊಂಡಿರುವ ಹಳ್ಳಿಗಳಲ್ಲಿ ಕೇಳಿ ಬಂದವು.</p>.<p>ಬೆಳಿಗ್ಗೆ 10 ಗಂಟೆವರೆಗೆ ಮತಗಟ್ಟೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಸಾಲು ಕಂಡು ಬಂದಿತು. ಮಧ್ಯಾಹ್ನ 2 ಗಂಟೆ ಸಮಯಕ್ಕೆ ಬಿಸಿಲಿನ ಬೇಗೆ ಹೆಚ್ಚಿದ್ದರಿಂದ ಮತಕೇಂದ್ರಗಳ ಬಳಿ ರಾಜಕೀಯ ಪಕ್ಷಗಳು ಹಾಕಿದ್ದ ಶಾಮಿಯಾನದಲ್ಲಿ ಒಂದಿಬ್ಬರು ಕಾರ್ಯರ್ತರು ಮಾತ್ರ ಕಂಡುಬಂದರು. ಸಂಜೆ 4 ಗಂಟೆಯ ನಂತರ ಮತ್ತೆ ಮತಗಟ್ಟೆಗಳ ಮುಂದೆ ಮತದಾರರು ಸಾಲುಗಟ್ಟಿ ನಿಂತಿದ್ದರು.</p>.<p>ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಹಿರಿಯೂರು ಕ್ಷೇತ್ರದಲ್ಲಿ 67.52 ಮತದಾನವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ಕ್ಷೇತ್ರದಲ್ಲಿ ಶುಕ್ರವಾರ ಲೋಕಸಭೆಗೆ ನಡೆದ ಮತದಾನ ಶಾಂತಿಯುತವಾಗಿತ್ತು. ಬೆಸ್ಕಾಂ ಇಲಾಖೆ ವಸತಿ ಗೃಹದ ಆವರಣದಲ್ಲಿರುವ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ 109 ವರ್ಷದ ತಿಪ್ಪೀರಮ್ಮ ಅವರು ತಮ್ಮ ಮೊಮ್ಮಗ ಪ್ರಮೋದ್ ಜೊತೆ ಹೋಗಿ ಮತ ಚಲಾಯಿಸಿ ಅಚ್ಚರಿ ಮೂಡಿಸಿದರು.</p>.<p>ನಗರದ ವರ್ತಕ ಎಚ್.ಎಸ್.ಅಮರನಾಥ್ ಅವರ ಪುತ್ರ ಎಚ್.ಎ. ಸತ್ಯ ಹುಳಿಯಾರು ರಸ್ತೆಯಲ್ಲಿರುವ ತುಳಸಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಮಾಂಗಲ್ಯ ಧಾರಣೆ ಮುಗಿಸಿಕೊಂಡು ಮತಗಟ್ಟೆ ಸಂಖ್ಯೆ 174ಕ್ಕೆ ಬಂದು ಮತದಾನ ಮಾಡುವ ಮೂಲಕ ಗಮನ ಸೆಳೆದರು.</p>.<p>ತಾಲ್ಲೂಕಿನ ಮ್ಯಾಕ್ಲೂರಹಳ್ಳಿಯ ಬೋವಿ ಕಾಲೊನಿಯಲ್ಲಿ ಶುಕ್ರವಾರ ಬೆಳಿಗ್ಗೆ 20ಕ್ಕೂ ಹೆಚ್ಚು ಮಹಿಳೆಯರು ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ ಮಾಡುವವರೆಗೆ ಮತ ಚಲಾಯಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರು ಮಹಿಳೆಯರ ಮನ ಒಲಿಸಿ ಮತದಾನ ಮಾಡಿಸಿದರು.</p>.<p>ಹಣ ಹಂಚಿಕೆಯಲ್ಲಿ ತಾರತಮ್ಯ: ‘ಪ್ರಮುಖ ರಾಜಕೀಯ ಪಕ್ಷವೊಂದು ನಗರದಲ್ಲಿನ ಮತದಾರರಿಗೆ ತಲಾ ₹ 300 ಹಂಚಿದ್ದು, ಗ್ರಾಮೀಣ ಭಾಗದಲ್ಲಿ ₹ 200 ಕೊಟ್ಟಿದ್ದಾರೆ. ಹಳ್ಳಿಯ ಓಟುಗಳಿಗೆ ಬೆಲೆ ಕಡಿಮೆಯೇ? ಇಂತಹ ತಾರತಮ್ಯ ಸರಿಯಲ್ಲ, ತಕ್ಕ ಪಾಠ ಕಲಿಸುತ್ತೇವೆ’ ಎಂಬ ಮಾತುಗಳು ನಗರಕ್ಕೆ ಹೊಂದಿಕೊಂಡಿರುವ ಹಳ್ಳಿಗಳಲ್ಲಿ ಕೇಳಿ ಬಂದವು.</p>.<p>ಬೆಳಿಗ್ಗೆ 10 ಗಂಟೆವರೆಗೆ ಮತಗಟ್ಟೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಸಾಲು ಕಂಡು ಬಂದಿತು. ಮಧ್ಯಾಹ್ನ 2 ಗಂಟೆ ಸಮಯಕ್ಕೆ ಬಿಸಿಲಿನ ಬೇಗೆ ಹೆಚ್ಚಿದ್ದರಿಂದ ಮತಕೇಂದ್ರಗಳ ಬಳಿ ರಾಜಕೀಯ ಪಕ್ಷಗಳು ಹಾಕಿದ್ದ ಶಾಮಿಯಾನದಲ್ಲಿ ಒಂದಿಬ್ಬರು ಕಾರ್ಯರ್ತರು ಮಾತ್ರ ಕಂಡುಬಂದರು. ಸಂಜೆ 4 ಗಂಟೆಯ ನಂತರ ಮತ್ತೆ ಮತಗಟ್ಟೆಗಳ ಮುಂದೆ ಮತದಾರರು ಸಾಲುಗಟ್ಟಿ ನಿಂತಿದ್ದರು.</p>.<p>ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಹಿರಿಯೂರು ಕ್ಷೇತ್ರದಲ್ಲಿ 67.52 ಮತದಾನವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>