‘ಚಿತ್ರದುರ್ಗ ಮತ್ತು ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಎನ್ಡಿಎ ಮೈತ್ರಿ ಅಭ್ಯರ್ಥಿಗಳ ಗೆಲುವಿನಲ್ಲಿ ಕಾಡುಗೊಲ್ಲ ಸಮಾಜ ನಿರ್ಣಾಯಕ ಪಾತ್ರ ವಹಿಸುವುದರ ಮೂಲಕ ದೇವೇಗೌಡರ ಮಾತಿಗೆ ಸ್ಪಂದಿಸಿದೆ. ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸುವ ಪ್ರಸ್ತಾವ ಈಗಾಗಲೇ ಕೇಂದ್ರ ಸರ್ಕಾರದ ಮುಂದಿದ್ದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ತಮ್ಮ ಪ್ರಭಾವ ಬಳಸಿ ಒಪ್ಪಿಗೆ ಪಡೆಯುವ ಮೂಲಕ ನಮ್ಮ ಸಮಾಜಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಡಬೇಕು’ ಎಂದು ಆಗ್ರಹಿಸಿದ್ದಾರೆ.