<p><strong>ಹಿರಿಯೂರು:</strong> ‘ತಂಬಾಕು ಮೊದಲಾದ ಮಾದಕ ವಸ್ತುಗಳ ಸೇವನೆಯಿಂದ ಅನಾರೋಗ್ಯ ಖಚಿತ. ದುಶ್ಚಟಗಳಿಂದ ದೂರವಿದ್ದು, ಆರೋಗ್ಯವಂತ ಬದುಕು ರೂಪಿಸಿಕೊಳ್ಳಿ’ ಎಂದು ನಿವೃತ್ತ ಪ್ರಾಂಶುಪಾಲ ಎಚ್.ಟಿ. ಚಂದ್ರಶೇಖರಯ್ಯ ಸಲಹೆ ನೀಡಿದರು.</p>.<p>ನಗರದ ಮಿರ್ಜಾ ಬಡಾವಣೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಈಚೆಗೆ ಏರ್ಪಡಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ತಂಬಾಕು ಸೇವನೆಯಿಂದ ಕ್ಯಾನ್ಸರ್ ಬರುತ್ತದೆ. ಇದು ಇಡೀ ಕುಟುಂಬವನ್ನು ಆರ್ಥಿಕವಾಗಿ ಆಪೋಷನ ತೆಗೆದುಕೊಳ್ಳುತ್ತದೆ’ ಎಂದು ಎಚ್ಚರಿಸಿದರು.</p>.<p>‘ಮಾದಕ ದ್ರವ್ಯ ಸೇವನೆಯಿಂದ ಸಿಗುವ ಖುಷಿ ಕ್ಷಣಿಕ. ದಿನಕಳೆದಂತೆ ದೇಹದ ಇಂಚಿಂಚೂ ಕೃಷವಾಗುತ್ತದೆ. ಪೌಷ್ಠಿಕ ಆಹಾರ ಸೇವಿಸಿ ಒಳ್ಳೆಯ ಹವ್ಯಾಸ ರೂಢಿಸಿಕೊಳ್ಳಬೇಕು’ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ತ್ರಿಯಂಭಕಮೂರ್ತಿ ಸಲಹೆ ನೀಡಿದರು.</p>.<p>‘ಮದ್ಯವರ್ಜನ ಶಿಬಿರ ಆಯೋಜಿಸುವ ಮೂಲಕ 30 ಜನ ಮದ್ಯ ತ್ಯಜಿಸಿ ಉತ್ತಮ ಬದುಕು ನಡೆಸುವಂತೆ ಮಾಡಲಾಗಿದೆ’ ಎಂದು ಯೋಜನಾಧಿಕಾರಿ ರವಿ ಹಿತ್ತಲಮನಿ ತಿಳಿಸಿದರು.</p>.<p>ಒಕ್ಕೂಟದ ಅಧ್ಯಕ್ಷೆ ಹಸೀನಾ, ವಲಯ ಮೇಲ್ವಿಚಾರಕ ಆರ್.ಸಂತೋಷ್, ಸೇವಾ ಪ್ರತಿನಿಧಿ ಶಾಂತಕುಮಾರಿ, ಮಿರ್ಜಾ ಬಡಾವಣೆ ಒಕ್ಕೂಟದ ಅಧ್ಯಕ್ಷೆ ಸರಸ್ವತಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-44-1771992515</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ‘ತಂಬಾಕು ಮೊದಲಾದ ಮಾದಕ ವಸ್ತುಗಳ ಸೇವನೆಯಿಂದ ಅನಾರೋಗ್ಯ ಖಚಿತ. ದುಶ್ಚಟಗಳಿಂದ ದೂರವಿದ್ದು, ಆರೋಗ್ಯವಂತ ಬದುಕು ರೂಪಿಸಿಕೊಳ್ಳಿ’ ಎಂದು ನಿವೃತ್ತ ಪ್ರಾಂಶುಪಾಲ ಎಚ್.ಟಿ. ಚಂದ್ರಶೇಖರಯ್ಯ ಸಲಹೆ ನೀಡಿದರು.</p>.<p>ನಗರದ ಮಿರ್ಜಾ ಬಡಾವಣೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಈಚೆಗೆ ಏರ್ಪಡಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ತಂಬಾಕು ಸೇವನೆಯಿಂದ ಕ್ಯಾನ್ಸರ್ ಬರುತ್ತದೆ. ಇದು ಇಡೀ ಕುಟುಂಬವನ್ನು ಆರ್ಥಿಕವಾಗಿ ಆಪೋಷನ ತೆಗೆದುಕೊಳ್ಳುತ್ತದೆ’ ಎಂದು ಎಚ್ಚರಿಸಿದರು.</p>.<p>‘ಮಾದಕ ದ್ರವ್ಯ ಸೇವನೆಯಿಂದ ಸಿಗುವ ಖುಷಿ ಕ್ಷಣಿಕ. ದಿನಕಳೆದಂತೆ ದೇಹದ ಇಂಚಿಂಚೂ ಕೃಷವಾಗುತ್ತದೆ. ಪೌಷ್ಠಿಕ ಆಹಾರ ಸೇವಿಸಿ ಒಳ್ಳೆಯ ಹವ್ಯಾಸ ರೂಢಿಸಿಕೊಳ್ಳಬೇಕು’ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ತ್ರಿಯಂಭಕಮೂರ್ತಿ ಸಲಹೆ ನೀಡಿದರು.</p>.<p>‘ಮದ್ಯವರ್ಜನ ಶಿಬಿರ ಆಯೋಜಿಸುವ ಮೂಲಕ 30 ಜನ ಮದ್ಯ ತ್ಯಜಿಸಿ ಉತ್ತಮ ಬದುಕು ನಡೆಸುವಂತೆ ಮಾಡಲಾಗಿದೆ’ ಎಂದು ಯೋಜನಾಧಿಕಾರಿ ರವಿ ಹಿತ್ತಲಮನಿ ತಿಳಿಸಿದರು.</p>.<p>ಒಕ್ಕೂಟದ ಅಧ್ಯಕ್ಷೆ ಹಸೀನಾ, ವಲಯ ಮೇಲ್ವಿಚಾರಕ ಆರ್.ಸಂತೋಷ್, ಸೇವಾ ಪ್ರತಿನಿಧಿ ಶಾಂತಕುಮಾರಿ, ಮಿರ್ಜಾ ಬಡಾವಣೆ ಒಕ್ಕೂಟದ ಅಧ್ಯಕ್ಷೆ ಸರಸ್ವತಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-44-1771992515</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>