ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು: ಎಎಸ್ಐ ಗಣೇಶ್ ಕೃಷ್ಣ ಗೌಡ ಹೃದಯಾಘಾತದಿಂದ ಸಾವು

Last Updated 4 ಡಿಸೆಂಬರ್ 2021, 3:05 IST
ಅಕ್ಷರ ಗಾತ್ರ

ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ಐಮಂಗಲ ಗ್ರಾಮದ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ನಿರತ ಎಎಸ್ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಗೋಕರ್ಣ ಪೋಲಿಸ್ ಠಾಣೆಯ ಎಎಸ್ಐ ಗಣೇಶ್ ಕೃಷ್ಣ ಗೌಡ (55) ಮೃತಪಟ್ಟವರು.

ಪೋಲಿಸ್ ತರಬೇತಿ ಶಾಲೆಯಲ್ಲಿ ಸುಮಾರು 370 ಎಎಸ್ಐಗಳಿಗೆ ಒಂದು ತಿಂಗಳ ಪುನರ್ ಮನನ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ನ. 29 ರಿಂದ ತರಬೇತಿ ಕಾರ್ಯಾಗಾರ ಪ್ರಾರಂಭವಾಗಿತ್ತು .

ಗಣೇಶ್ ಕೃಷ್ಣ ಗೌಡ ಅವರಿಗೆ ಶುಕ್ರವಾರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸಿದೇ ಅವರು ಮೃತಪಟ್ಟಿದ್ದಾರೆ ಎಂದು ಐಮಂಗಲ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT