ನಗರದ ಬಹುತೇಕ ಎಲ್ಲ ಅಂಗಡಿಗಳು ಬಾಗಿಲು ಮುಚ್ಚಿವೆ. ಎಂದಿನಂತೆ ತೆರೆದಿದ್ದ ಸರ್ಕಾರಿ ಕಚೇರಿಗಳಿಗೆ ತೆರಳಿದ ಹೋರಾಟ ಸಮಿತಿ ಮುಖಂಡರು ನೌಕರರ ಮನವೊಲಿಸಿ ಬಾಗಿಲು ಮುಚ್ಚಿಸಿದರು. ಶಾಲೆ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಟೊ, ಬಸ್ ಸೇರಿದಂತೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.